ನವದೆಹಲಿ: ಕೇರಳದಲ್ಲಿ ಹೊಸದಾಗಿ ನಿಫಾ ವೈರಸ್ ಪ್ರಕರಣ ಕಂಡುಬಂದಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್ ಹೇಳಿದ್ದಾರೆ.
ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಜೂನ್ 3 ರಂದು ನಿಫಾ ವೈರಸ್ ಪ್ರಕರಣ ಪತ್ತೆಯಾಗಿತ್ತು. ಈ ಸೋಂಕು ಪತ್ತೆಯಾಗಿದ್ದ ಕಾಲೇಜ್ ವಿದ್ಯಾರ್ಥಿ ಆರೋಗ್ಯ ಪರಿಸ್ಥಿತಿ ಸುಧಾರಿಸಿದೆ. 318 ಜನರು ವಿದ್ಯಾರ್ಥಿಗಳ ಜೊತೆ ಸಂಪರ್ಕದಲ್ಲಿದ್ದಾರೆ. ಅವರ ಬಗ್ಗೆ ನಿಗಾ ವಹಿಸಲಾಗಿದೆ. 52 ಮಂದಿಯನ್ನು ಹೆಚ್ಚಿನ ಅಪಾಯದ ವರ್ಗ ಎಂದು ಗುರುತಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಕೇರಳದಲ್ಲಿನ ಆರೋಗ್ಯ ಮುನ್ನೆಚ್ಟರಿಕಾ ಕ್ರಮವನ್ನು ನಿರಂತರವಾಗಿ ಪರಾಮರ್ಶೆ ನಡೆಸುತ್ತಿರುವ ಹರ್ಷವರ್ಧನ್, ಈ ಸೋಂಕು ತಡೆಗಾಗಿ ಕೇರಳ ಆರೋಗ್ಯ ಸಚಿವೆ ಕೆಕೆ ಶೈಲಜಾ ಅವರಿಗೆ ಕೇಂದ್ರದಿಂದ ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.
ಈ ಮಧ್ಯೆ ಭೂಪಾಲ್ ನ ಪ್ರಾಣಿಗಳ ರೋಗಳ ಅತ್ಯುನ್ನತ ಸುರಕ್ಷತೆ ರಾಷ್ಟ್ರೀಯ ಸಂಸ್ಥೆ – ಎನ್ ಐಹೆಚ್ ಎಸ್ ಎಡಿಯ ತಜ್ಞರು ಕೇರಳದ ಪಶುಪಾಲನಾ ಇಲಾಖೆಗೆ ಬೆಂಬಲ ನೀಡುತ್ತಿದ್ದಾರೆ. ಈ ತಜ್ಞರ ತಂಡ ಮಾದರಿಗಳನ್ನು ಸಂಗ್ರಹಿಸಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಎನ್ ಸಿಡಿಸಿ, ಎಐಐಎಂಎಸ್, ಮತ್ತು ಐಸಿಎಂಆರ್ ತಜ್ಞರು ಸೇರಿದಂತೆ ಬಹು ಹಂತಗಳ ಕೇಂದ್ರ ತಂಡವನ್ನು ನಿಯೋಜಿಸಲಾಗಿದ್ದು, ತನಿಖೆಯಲ್ಲಿ ಕೇರಳ ರಾಜ್ಯಕ್ಕೆ ಸಹಕಾರ ನೀಡಲಾಗುತ್ತಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ