ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಭಾನುವಾರ ರಾತ್ರಿ ಅಬುಧಾಬಿಗೆ ಹೊರಡಬೇಕಿದ್ದ ಏರ್ ಇಂಡಿಯಾ ವಿಮಾನ ತಾಂತ್ರಿಕ ಸಮಸ್ಯೆಯಿಂದ ವಿಮಾನ ನಿಲ್ದಾಣದಲ್ಲೇ ಬಾಕಿಯಾಗಿದ್ದು, ಅದರಲ್ಲಿದ್ದ ಪ್ರಯಾಣಿಕರು ಸುಮಾರು 10 ಗಂಟೆಗಳ ಕಾಲ ಟರ್ಮಿನಲ್ನಲ್ಲೇ ಬಾಕಿಯಾದ ಘಟನೆ ನಡೆದಿದೆ.
ಮಂಗಳೂರು- ಅಬುಧಾಬಿ ನಡುವಿನ ಏರ್ ಇಂಡಿಯಾ ವಿಮಾನ ಭಾನುವಾರ ರಾತ್ರಿ 8.45ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಟೇಕಾಫ್ ಆಗಬೇಕಿತ್ತು. ಆದರೆ ತಾಂತ್ರಿಕ ಸಮಸ್ಯೆ ಕಂಡು ಬಂದಿದ್ದರಿಂದ ವಿಮಾನದ ಪೈಲಟ್ ಸಂಸ್ಥೆಗೆ ಮಾಹಿತಿ ನೀಡಿ ಎಂಜಿನಿಯರ್ಗಳನ್ನು ಕರೆಸಿದ್ದಾರೆ.
ತಡರಾತ್ರಿ ವರೆಗೂ ದುರಸ್ತಿ ಕಾರ್ಯ ನಡೆಸಿದ ಎಂಜಿನಿಯರ್ಗಳು ದುರಸ್ತಿಗೆ ಬೇಕಾದ ಬಿಡಿಭಾಗಗಳು ಇಲ್ಲದ ಕಾರಣಕ್ಕೆ ದುರಸ್ತಿ ನಡೆಸದೆ ಕೈ ಚೆಲ್ಲಿದ್ದಾರೆ. ಬಿಡಿಭಾಗಗಳು ಮುಂಬಯಿ ಮತ್ತು ತಿರುವನಂತಪುರದಲ್ಲಿ ಮಾತ್ರ ಲಭ್ಯವಿದ್ದ ಕಾರಣ ಅಲ್ಲಿಂದ ಬಿಡಿಭಾಗಗಳನ್ನು ತರಿಸಿ ದುರಸ್ತಿ ಮಾಡಿಸಬೇಕಾಗಿತ್ತು.
ಮಧ್ಯರಾತ್ರಿ ವೇಳೆಗೆ ದುರಸ್ತಿಗೆ ಬಿಡಿಭಾಗ ಇಲ್ಲ ಎಂಬ ಮಾಹಿತಿ ಬಂದ ಬಳಿಕ ಅಬುದಾಬಿಗೆ ಪ್ರಯಾಣಿಸಬೇಕಾಗಿದ್ದ 112 ಮಂದಿ ಪ್ರಯಾಣಿಕರಿಗೆ ಬದಲಿ ವ್ಯವಸ್ಥೆ ಅಥವಾ ಹೋಟೆಲ್ ವಾಸ್ತವ್ಯದ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗಿರಲಿಲ್ಲ. ಇದರಿಂದಾಗಿ ಪ್ರಯಾಣಿಕರು ಅತಂತ್ರರಾಗಿ ಟರ್ಮಿನಲ್ನಲ್ಲೇ ಉಳಿಯುವಂತಾಯಿತು.
ಬದಲೀ ವಿಮಾನದಲ್ಲಿ ವ್ಯವಸ್ಥೆ
ದುಬೈಯಿಂದ ಸೋಮವಾರ ಮುಂಜಾನೆ 4.30ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಏರ್ ಇಂಡಿಯಾ ವಿಮಾನ ಮರಳಿ ಬೆಳಗ್ಗೆ 9.10ಕ್ಕೆ ದುಬೈಗೆ ಪ್ರಯಾಣಿಸಬೇಕಿತ್ತು. ಈ ವಿಮಾನದ ಸಮಯ ಮತ್ತು ಮಾರ್ಗವನ್ನು ಬದಲಿಸಿ ಅಬುದಾಬಿಗೆ ತೆರಳಬೇಕಾದ ಪ್ರಯಾಣಿಕರಿಗೆ ಈ ವಿಮಾನದಲ್ಲಿ ವ್ಯವಸ್ಥೆ ಮಾಡಿಸಿ ಅವರನ್ನು ಕಳುಹಿಸಿಕೊಡಲಾಯಿತು.
ಬೆಳಗ್ಗೆ 6.30ರ ಸುಮಾರಿಗೆ ಬಾಕಿಯಾಗಿದ್ದ ಪ್ರಯಾಣಿಕರು ಅಬುದಾಬಿಗೆ ಪ್ರಯಾಣಿಸಿದರು. ಬೆಳಗ್ಗೆ 9.10ಕ್ಕೆ ದುಬೈಗೆ ಪ್ರಯಾಣಿಸಲಿದ್ದ ಪ್ರಯಾಣಿಕರಿಗೆ ಮೊದಲೇ ವಿಮಾನ ಅಲಭ್ಯತೆ ಬಗ್ಗೆ ಮಾಹಿತಿ ನೀಡಲಾಗಿತ್ತು. ತಾಂತ್ರಿಕ ದೋಷ ಕಾಣಿಸಿಕೊಂಡ ವಿಮಾನ ದುರಸ್ತಿ ಆದ ಬಳಿಕ ಮಧ್ಯಾಹ್ನ 2.30ಕ್ಕೆ
ದುಬೈ ಪ್ರಯಾಣಿಕರನ್ನು ಆ ವಿಮಾನದಲ್ಲಿ ಕಳುಹಿಸಿಕೊಡಲಾಗಿದೆ.
ಸಂವಹನ ಕೊರತೆಯಿಂದಾಗಿ ರಾತ್ರಿಯಿಡೀ ಪ್ರಯಾಣಿಕರು ವಿಮಾನ ನಿಲ್ದಾಣದಲ್ಲೇ ಉಳಿಯುವಂತಾಗಿತ್ತು.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್