ಬೆಂಗಳೂರು: ಚಿನ್ನಾಭರಣದ ಜತೆಗೆ ಹೆಚ್ಚಿನ ಬಡ್ಡಿಯ ಆಸೆ ತೋರಿಸಿದ್ದ ಐಎಂಎ ಜ್ಯುವೆಲರ್ಸ್ ಮಾಲೀಕ ಮನ್ಸೂರ್ ನೂರಾರು ಕೋಟಿ ರೂಪಾಯಿ ಸಂಗ್ರಹಿಸಿದ್ದರು ಆದರೆ ಈಗ ಅಂಗಡಿ ಮಾಲೀಕ ನಾಪತ್ತೆಯಾಗಿದ್ದು ಅಂಗಡಿ ಮುಂದೆ ಸಾವಿರಾರು ಜನತೆ ತಮ್ಮ ಹಣವನ್ನು ವಾಪಸ್ಸು ನೀಡುವಂತೆ ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ನಡುವೆ ಐಎಂಎ ಜ್ಯುವೆಲರ್ಸ್ ಮಾಲೀಕ ಮನ್ಸೂರ್ ನಾಪತ್ತೆ ಪ್ರಕರಣದಲ್ಲಿ ಶಿವಾಜಿನಗರ ಶಾಸಕ ರೋಷನ್ ಬೇಗ್ ಹೆಸರು ಕೇಳಿ ಬಂದಿದ್ದು ರೋಷನ್ ಬೇಗ್ ಅವರತು ನನ್ನಿಂದ ಕೋಟ್ಯಾಂತರ ರೂ ಹಣವನ್ನು ತೆಗೆದುಕೊಂಡಿದ್ದಾರೆ. ಈಗ ಹಣ ಕೇಳಿದರೆ ನನಗೆ ಧಮ್ಕಿ ಹಾಕುತ್ತಿದ್ದಾರೆ ಅಂತ ನಾಪತ್ತೆಯಾಗುವ ಮುನ್ನ ಐಎಂಎ ಜ್ಯುವೆಲರ್ಸ್ ಮಾಲೀಕ ಮನ್ಸೂರ್ ಮಾತನಾಡಿದ್ದಾರೆ ಎನ್ನಲಾಗಿರುವ ಆಡಿಯೋದಲ್ಲಿ ಹೇಳಲಾಗಿದೆ.
ಈ ನಡುವೆ ತಮ್ಮ ವಿರುದ್ದ ಐಎಂಎ ಜ್ಯುವೆಲರ್ಸ್ ಮಾಲೀಕ ಮನ್ಸೂರ್ ಮಾಡಿರುವ ಆರೋಪಕ್ಕೆ ಸಂಬಂಧಪಟ್ಟಂತೆ ರೋಷನ್ ಬೇಗ್ ಟ್ವಿಟರ್ ಮೂಲಕ ಸ್ಪಷ್ಟಪಡಿಸಿದ್ದು, ತಮಗೂ ಐಎಂಎ ಜ್ಯುವೆಲರ್ಸ್ಗೂ ಯಾವುದೇ ಸಂಬಂಧವಿಲ್ಲ. ಈ ವಿಷಯದಲ್ಲಿ ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಅಂತ ಹೇಳಿದ್ದಾರೆ. ಇದೇ ವೇಳೆ ಅವರು ನಾನೊಬ್ಬ ಜನಪ್ರತಿನಿಧಿಯಾಗಿ, ಸಮಾಜ ಸೇವಕನಾಗಿ ಸಮಾಜ ಸೇವೆಯಲ್ಲಿ ತೊಡಗಿದ್ದ ಸಂಸ್ಥೆಗಳ ಜತೆ ಸಂಬಂಧ ಮತ್ತು ಸಂಪರ್ಕ ಹೊಂದಿರುತ್ತೇನೆ. ನನ್ನ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮತ್ತು ವದಂತಿಗಳನ್ನು ಹಬ್ಬಿಸುತ್ತಿರುವ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ನಾನು ನಿರ್ಧರಿಸಿದ್ದೇನೆ ಎಂದು ಟ್ವೀಟ್ನಲ್ಲಿ ಸ್ಪಷ್ಟಪಡಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ