ಬೆಂಗಳೂರು, ಜೂ 11; ಮುಂಬರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಮಯದಲ್ಲಿ ಕನಿಷ್ಠ ಮುಸ್ಲಿಂ ಸಮುದಾಯದ ಒಬ್ಬ ಶಾಸಕನಿಗಾದರೂ ಅವಕಾಶ ಮಾಡಿಕೊಡಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಒತ್ತಾಯಿಸಿದ್ದಾರೆ
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಮುಸ್ಲಿಂ ಸಮುದಾಯದ ಸದಸ್ಯರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ, ಇಲ್ಲಿ ಕಡೇ ಪಕ್ಷ ಸಚಿವ ಸ್ಥಾನವನ್ನಾದರೂ ನೀಡಬೇಕು ಎಂದು ಆಗ್ರಹ ಪಡಿಸಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಮುಸ್ಲಿಂ ಸದಸ್ಯರಿಗೆ ಪ್ರಾತಿನಿಧ್ಯ ನೀಡಲಾಗಿದೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಅವಧಿಯಲ್ಲೂ ಮುಸ್ಲಿಮ್ ಸಮುದಾಯದ ಸದಸ್ಯರಿಗೆ ಸಂಪುಟ ದರ್ಜೆ ಮಂತ್ರಿಸ್ಥಾನ ನೀಡಲಾಗಿತ್ತು ಎಂಬ ವಿಷಯವನ್ನು ಅವರು ವರಿಷ್ಠರ ಗಮನಕ್ಕೆ ತಂದಿದ್ದಾರೆ.
ಇತ್ತೀಚೆಗೆ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮುಸ್ಲಿಂ ಜನಾಂಗ ಪಕ್ಷಕ್ಕೆ ಬೆಂಬಲಕೊಟ್ಟಿದೆ ಎಂಬುದನ್ನು ವಿಶ್ವನಾಥ್ ಒತ್ತಿ ಹೇಳಿದ್ದಾರೆ.ಜೆಡಿಎಸ್ ಕೋಟಾದಲ್ಲಿ ದಲಿತ ಸಮುದಾಯಕ್ಕೆ ಒಂದು ಸಚಿವ ಪದವಿಯನ್ನು ಮೀಸಲಿಡಬೇಕು ಎಂದು ಅವರು ಮನವಿ ಮಾಡಿದ್ದಾರೆ. ಲೋಕಸಭಾ ಚುನಾವಣೆ ಸೋಲಿನ ಕಾರಣ ನೈತಿಕ ಹೊಣೆ ಹೊತ್ತು ಅವರು ಪಕ್ಷದ ಅಧ್ಯಕ್ಷ ಪದವಿಗೆ ರಾಜೀನಾಮೆ ನೀಡಿದ್ದರೂ ಪಕ್ಷ ಅದನ್ನು ಇದುವರೆಗೆ ಅಂಗೀಕಾರ ಮಾಡಿಲ್ಲ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ