janadhvani

Kannada Online News Paper

ನಾಳೆ ಇಶಾರ ಪತ್ರಿಕಾ ನೂತನ ಕಛೇರಿ ಉದ್ಘಾಟನೆ

ಮಂಗಳೂರು: ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಷನ್ ಇದರ ಮುಖವಾಣಿ ‘ಇಶಾರ ಪಾಕ್ಷಿಕ’ ಇದರ ಸುಸಜ್ಜಿತ ನೂತನ ಕಛೇರಿಯನ್ನು ಮಂಗಳೂರು ಅಡ್ಯಾರ್ ನಲ್ಲಿರುವ ಕೆ.ಎಚ್.ಕೆ. ರೆಸಿಡೆನ್ಸಿ ಯಲ್ಲಿ ಜೂನ್,13 ರಂದು ಬೆಳಿಗ್ಗೆ 10 ಗಂಟೆಗೆ ಸುನ್ನೀ ಜಂಇಯ್ಯತುಲ್ ಉಲಮಾ ರಾಜ್ಯ ಪ್ರಧಾನ ಕಾರ್ಯದರ್ಶಿ ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಉದ್ಘಾಟಿಸಲಿದ್ದು ಡಾ|ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ ದುವಾ ನೇರವೇರಿಸಲಿದ್ದಾರೆ.

ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಸಯ್ಯಿದ್ ಉಮರ್ ಅಸ್ಸಖಾಫ್ ಅಧ್ಯಕ್ಷತೆವಹಿಸುವರು. ಎಸ್ ವೈ ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ ಎಮ್ಮೆಸ್ಸೆಎಮ್ ಝೈನಿ ಕಾಮಿಲ್, ಕೆಸಿಎಫ್ ಅಂತಾರಾಷ್ಟ್ರೀಯ ಅಧ್ಯಕ್ಷ ಎಸ್.ಪಿ. ಹಂಝ ಸಖಾಫಿ ಬಂಟ್ವಾಳ ,ಅಬ್ದುಲ್ ಹಮೀದ್ ಬಜಪೆ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಹಾಗೂ ಎಸ್ಸೆಸ್ಸೆಫ್ ರಾಜ್ಯ ಸಮಿತಿ ಸದಸ್ಯರು, ಜಿಲ್ಲಾ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಇಶಾರ ಮಂಡಳಿ ಸಮಿತಿಯ ಕಾರ್ಯದರ್ಶಿ ಹುಸೈನ್ ಸಅದಿ ಹೊಸ್ಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !! Not allowed copy content from janadhvani.com