ನವದೆಹಲಿ(ಜೂನ್.12): ತ್ರಿವಳಿ ತಲಾಖ್ ನಿಷೇಧಕ್ಕೆ ಸಂಬಂಧಿಸಿದಂತೆ ಹೊಸ ಮಸೂದೆ ಜಾರಿಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. 17ನೇ ಲೋಕಸಭೆಯ ಮೊದಲ ಮುಂಗಾರು ಅಧಿವೇಶನ ಜೂನ್ 17 ರಿಂದ ಆರಂಭವಾಗಲಿದೆ. ಈ ವೇಳೆ ಕೇಂದ್ರ ಸರ್ಕಾರ ತ್ರಿವಳಿ ತಲಾಖ್ ನಿಷೇಧದ ಕುರಿತಾದ ಹೊಸ ಮಸೂದೆಯನ್ನು ಮಂಡಿಸಲಿದೆ.
ಕೇಂದ್ರ ಸರ್ಕಾರ ಈ ಹಿಂದೆಯೇ ತ್ರಿವಳಿ ತಲಾಖ್ ನಿಷೇಧದ ಹೊಸ ಮಸೂದೆ ಜಾರಿಗೆ ತರಬೇಕಿತ್ತು. ಈ ಮುನ್ನವೇ 16ನೇ ಲೋಕಸಭೆ ಅವಧಿ ಮುಕ್ತಾಯ ಮತ್ತು ರಾಜ್ಯಸಭೆಯಲ್ಲಿ ಮಸೂದೆಗೆ ಅಂಗೀಕಾರ ಸಿಗದ ಕಾರಣ ಅದು ಮಂಡನೆಯಾಗಿರಲಿಲ್ಲ.
16ನೇ ಲೋಕಸಭೆಯಲ್ಲಿ ಅನುಮೋದನೆ ಪಡೆದ ಬಳಿಕ ತ್ರಿವಳಿ ತಲಾಖ್ ಮಸೂದೆ ರಾಜ್ಯಸಭೆಯಲ್ಲಿ ಮಂಡನೆಯಾಗಿತ್ತು. ಆದರೆ, ಮಸೂದೆಯನ್ನು ಸೆಲೆಕ್ಟ್ ಕಮಿಟಿಯ ಪರಿಶೀಲನೆಗೆ ಕೊಡಬೇಕೆಂದು ವಿಪಕ್ಷಗಳು ಆಗ್ರಹ ಪಡಿಸಿದ್ದವು. ಬಳಿಕ ರಾಜ್ಯಸಭೆಯಲ್ಲಿ ಕೂಡ ವಿಪಕ್ಷಗಳ ಗದ್ದಲದ ನುಡವೇ ಇತ್ಯರ್ಥವಾಗದೇ ಹೋದರು ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು.
ತ್ರಿವಳಿ ತಲಾಖ್ ಎಂಬುವುದು ಇಸ್ಲಾಮಿನಲ್ಲಿ ಪ್ರೋತ್ಸಾಹನೀಯ ಕಾರ್ಯವಲ್ಲ ಆದರೂ ಅತೀ ಅವಶ್ಯಕ ಸಂದರ್ಭಗಳಲ್ಲಿ ದಾಂಪತ್ಯ ಜೀವನ ಮುನ್ನಡೆಸಲು ಸಾಧ್ಯವಿಲ್ಲವೆಂಬ ಘಟ್ಟದಲ್ಲಿ ಪತಿ ಪತ್ನಿಯರು ಪರಸ್ಪರ ಬಂಧವನ್ನು ಬೇರ್ಪಡಿಸಲು ಇಸ್ಲಾಮ್ ನೀಡಿದ ಒಂದು ಸಿಂಧುವಾದ ಕಾರ್ಯವಾಗಿದೆ.
ಆದರೆ ಅದನ್ನು ಕೆಲವು ಅಜ್ಞಾನಿಗಳು ಬೇಕಾಬಿಟ್ಟಿಯಾಗಿ ಉಪಯೋಗಿಸುತ್ತಿದ್ದು, ಧರ್ಮಕ್ಕೆ ಮಾರಕವಾಗಿ ಪರಿಣಮಿಸಿದೆ.
ತ್ರಿವಳಿ ತಲಾಖ್ ನಿಷೇಧ ಕಾನೂನನ್ನು ಜಾರಿ ಮಾಡುವುದು ಮುಸ್ಲಿಮರ ಧಾರ್ಮಿಕ ಹಕ್ಕನ್ನು ನಿಷೇಧಿಸಿದಂತೆ. ಅದನ್ನು ದುರುಪಯೋಗ ಪಡಿಸುವುದನ್ನು ಹೇಗೆ ತಡೆಗಟ್ಟಬಹುದು ಎಂಬುದನ್ನು ಧಾರ್ಮಿಕ ಮುಖಂಡರೊಂದಿಗೆ ಚರ್ಚಿಸಿ ಕಾರ್ಯರೂಪಕ್ಕೆ ತರಲು ಸರ್ಕಾರ ಮುಂದಾಗಬೇಕಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ