ಅಜ್ಮಾನ್: ಕೆಲಸ ನೀಡುವ ಆಮಿಷ ನೀಡಿ ಯುವಕರನ್ನು ಸಂದರ್ಶಕ ವಿಸಾದಲ್ಲಿ ಗಲ್ಫ್ಗೆ ಕರೆತಂದು ವಂಚಿಸುವ ಜಾಲ ಇನ್ನೂ ಕಾರ್ಯಾಚರಿಸುತ್ತಿದ್ದು, ಕೇರಳದ ವಿವಿಧ ಕಡೆಯಿಂದ ಬಂದ ಯುವಕರು ಯುಎಇಯ ಅಜ್ಮಾನಿನಲ್ಲಿ ಯಾತನೆ ಅನುಭವಿಸುತ್ತಿದ್ದಾರೆ. ವಿಸಾಗಾಗಿ ಭಾರೀ ಮೊತ್ತದ ಹಣವನ್ನು ಏಜನ್ಸಿಗಳು ಇವರಿಂದ ಪಡೆದಿದ್ದಾರೆ ಎನ್ನಲಾಗಿದೆ. ತಿಂಗಳುಗಳು ಕಳೆದರೂ ಇವರಿಗೆ ಯಾವುದೇ ಕೆಲಸ ಸಿಗದಿದ್ದು, ಅಜ್ಮಾನ್ ಒಂದರಲ್ಲೇ ಸುಮಾರು ನೂರಕ್ಕಿಂತಲೂ ಹೆಚ್ಚು ಮಂದಿ ಸಿಲುಕಿಕೊಂಡಿದ್ದಾರೆ.
ಪೆರಿಂದಲ್ಮಣ್ಣಾದ ಕ್ಯಾಲಿಕೆಟ್ ಟ್ರಾವೆಲ್ಸ್, ಅಡೂರಿನ ಅಡೂರ್ ಜಾಬ್ಸ್, ವಂಡೂರಿನ ಬಿಸ್ಮಿ ಟ್ರಾವಲ್ಸ್ ಮುಂತಾದ ಸಂಸ್ಥೆಗಳಿಗೆ ಐವತ್ತು ಸಾವಿರದಿಂದ ಒಂದು ಲಕ್ಷದವರೆಗೆ ನೀಡಿ ಇವರ ಪೈಕಿ ಹೆಚ್ಚಿನವರು ಯುಎಇ ತಲುಪಿದ್ದಾರೆ. ಈ ಹಿಂದೆ ಇದೇ ತರಹದ ವಂಚೆನೆ ಮಾಡಿದ್ದ ಶಾಜಹಾನ್, ನೌಶಾದ್, ಜಯಪ್ರಕಾಶ್, ಮುಜೀಬ್ ಮುಂತಾದವರೇ ಯುಎಇಯಲ್ಲಿ ಏಜೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎನ್ನಲಾಗಿದೆ.
ಪ್ರಸಕ್ತ ಈ ಯುವಕರೂ ವಾಸವಿರುವ ಸ್ಥಳದಿಂದ ಹೊರದಬ್ಬಲ್ಪಡುವ ಶೋಚನೀಯ ಪರಿಸ್ಥಿತಿಯಲ್ಲಿದ್ದು, ಇಪ್ಪತ್ತು ಸಾವಿರ ಕೂಡ ಖರ್ಚಿಲ್ಲದೆ ಲಭಿಸುವ ವಿಸಾ ನೀಡಿ ಈ ಯುವಕರಿಂದ ಲಕ್ಷಾಂತರ ರೂ. ಪಡೆದು ವಂಚಿಸಲಾಗಿದೆ. ಈ ಬಗ್ಗೆ ಹಲವಾರು ಪ್ರಕರಣಗಳು ವರದಿಯಾಗುತ್ತಿದ್ದರೂ ವಂಚಿತರಾಗುವವರಿಗೆ ಯಾವುದೇ ಕೊರತೆ ಇಲ್ಲ ಎನ್ನಲಾಗಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ