ಬಿಶ್ಕೆಕ್,ಜೂನ್.13: ಇಂದು ಸೆಂಟ್ರಲ್ ಏಷ್ಯಾದ ಕಿರ್ಗಿಸ್ತಾನ ರಾಜಧಾನಿ ಬಿಶ್ಕೆಕ್ ನಗರದಲ್ಲಿ ನಡೆದ ಶಾಂಘೈ ಸಹಕಾರ ಸಂಘದ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗಿಯಾಗಿದ್ದರು. ಈ ಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರ ಜೊತೆಗೆ ನರೇಂದ್ರ ಮೋದಿಯವರು ಪ್ರಮುಖ ವಿಚಾರಗಳ ಸುತ್ತ ಮಾತುಕತೆ ನಡೆಸಿದರು.
ಉಗ್ರರ ಜೊತೆಗೂಡಿ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಇವರ ಭಯೋತ್ಪಾದನೆಯಿಂದಾಗಿ ಭಾರತ ತೊಂದರೆ ಅನುಭವಿಸುತ್ತಿದೆ. ಹಾಗಾಗಿ ಉಭಯ ದೇಶಗಳ ವಿಚಾರದಲ್ಲಿ ಶಾಂತಿಯುತ ಮಾತುಕತೆ ಕಷ್ಠ ಎಂದು ಹೇಳಿದ್ದಾರೆ.
ಮೊದಲಿಗೆ ಕಿರ್ಗಿಸ್ತಾನದ ಬಿಶ್ಕೆಕ್ಗೆ ಪ್ರಧಾನಿ ಮೋದಿಯವರು ಪಾಕ್ ವಾಯುಮಾರ್ಗ ಮೂಲಕ ತೆರಳಲಿದ್ದಾರೆ ಎಂದು ಹೇಳಲಾಗಿತ್ತು. ಪ್ರಧಾನಿ ವಿಮಾನ ಪಾಕಿಸ್ತಾನದ ವಾಯುಮಾರ್ಗದಲ್ಲಿ ಸಂಚರಿಸಲಿದೆ ಎಂದು ಪಾಕಿಸ್ತಾನದ ಬಳಿ ಭಾರತ ತಾತ್ವಿಕ ಒಪ್ಪಿಗೆಯೂ ಪಡೆದಿತ್ತು. ಬಳಿಕ ಪ್ರಧಾನಿ ಮೋದಿ ಪಾಕ್ ವಾಯುಮಾರ್ಗದಲ್ಲಿ ತೆರಳದೇ ಮಾರ್ಗ ಬದಲಿಸಿದ್ದಾರೆ. ಒಮನ್, ಇರಾನ್ ಮೂಲಕ ಬಿಶ್ಕೆಕ್ಗೆ ಆಗಮಿಸಿ ಶೃಂಗಸಭೆಯಲ್ಲಿ ಭಾಗಿಯಾಗಿದ್ದಾರೆ.















ಇನ್ನಷ್ಟು ಸುದ್ದಿಗಳು
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ವಿಕಾಸದ ಕೂಗಿನೊಂದಿಗೆ ಇತ್ತಿಹಾದ್ ರೈಲು; ಟಿಕೆಟ್ ದರ ಮತ್ತು ರಿಯಾಯಿತಿಗಳ ಘೋಷಣೆ
ಯುಎಇ: ಮುಂದುವರಿದ ಭಾರತೀಯ ಪಾಸ್ಪೋರ್ಟ್ ಸೇವಾ ಬಿಕ್ಕಟ್ಟು
ಇತ್ತಿಹಾದ್ ರೈಲಿಗೆ ಐತಿಹಾಸಿಕ ಕ್ಷಣ; ಭವ್ಯ ಆರಂಭಕ್ಕೆ ಯುಎಇನಲ್ಲಿ ಅಭೂತಪೂರ್ವ ಜನಸ್ಪಂದನ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ