ವಡೋದರ: ಗುಜರಾತ್ನ ವಡೋದರ ಸಮೀಪದ ಫರ್ತಿಕ್ವೈ ಎಂಬಲ್ಲಿ ಹೋಟೆಲ್ವೊಂದರ ಟ್ಯಾಂಕ್ ಸ್ವಚ್ಛಗೊಳಿಸಲು ಇಳಿದಿದ್ದ ಏಳು ಮಂದಿ ವಿಷಾನಿಲ ಸೇವನೆಯಿಂದ ಮೃತಪಟ್ಟಿರುವ ದಾರುಣ ಘಟನೆ ಶನಿವಾರ ನಡೆದಿದೆ.
ಮೃತರ ಪೈಕಿ ಮೂವರು ಹೋಟೆಲ್ ಸಿಬ್ಬಂದಿಯಾಗಿದ್ದು, ಇನ್ನುಳಿದ ನಾಲ್ವರು ಪೌರಕಾರ್ಮಿಕರು ಎನ್ನಲಾಗಿದೆ. ನಿರ್ಲಕ್ಷ್ಯದ ಆರೋಪದ ಮೇಲೆ ಹೋಟೆಲ್ ಮಾಲೀಕನ ಮೇಲೆ ಪ್ರಕರಣ ದಾಖಲಿಸಿಲಾಗಿದೆ. ಮೃತ ಹೋಟೆಲ್ ಸಿಬ್ಬಂದಿಯನ್ನು ಜೈ ವಾಸವ (24), ವಿಜಯ್ ಚೌಹಾಣ್ (22), ಸಹದೇವ ವಾಸವ (22) ಎಂದು ಗುರುತಿಸಲಾಗಿದೆ. ಮೃತ ಪೌರ ಕಾರ್ಮಿಕರ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಹೊಟೇಲ್ನ ಟ್ಯಾಂಕ್ ಸ್ವಚ್ಛಗೊಳಿಸಲೆಂದು ಮೊದಲಿಗೆ ಸಿಬ್ಬಂದಿಯೊಬ್ಬರು ಟ್ಯಾಂಕ್ಗೆ ಇಳಿದಿದ್ದಾರೆ. ಕೆಲ ನಿಮಿಷಗಳ ನಂತರ ಅವರು ಪ್ರಜ್ಞಾ ಹೀನರಾಗಿದ್ದಾರೆ. ಅವರನ್ನು ಮೇಲೆತ್ತಲೆಂದು ಮತ್ತೊಬ್ಬರು ಇಳಿದಿದ್ದಾರೆ. ಆವರಿಗೂ ಅದೇ ಪರಿಸ್ಥಿತಿಯುಂಟಾಗಿದೆ. ಹೀಗೆ ಮೂವರೂ ಸಾವಿಗೀಡಾಗಿದ್ದರು. ವಿಷಾನಿಲದ ಪರಿಣಾಮವಾಗಿ ಹೋಟೆಲ್ ಸಿಬ್ಬಂದಿ ಮೃತಪಟ್ಟಿದ್ದರು. ಇದಾದ ನಂತರ ಟಾಂಕ್ ಇಳಿದ ನಾಲ್ವರು ಕಾರ್ಮಿಕರೂ ವಿಷಾನಿಲ ಸೇವನೆಯಿಂದ ಮೃತಪಟ್ಟಿದ್ದಾರೆ.
ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದು ದೇಹಗಳನ್ನು ಹೊರತೆಗೆದಿದ್ದಾರೆ.
ಇನ್ನಷ್ಟು ಸುದ್ದಿಗಳು
ಹಿಂದಿ,ಆಂಗ್ಲಭಾಷೆಯಲ್ಲಿ ಶಂಕುಸ್ಥಾಪನೆ- ಅಮಿತ್ ಶಾ, ಸಿಎಂ ರಿಂದ ಕನ್ನಡಕ್ಕೆ ದ್ರೋಹ
ಅಮಾಯಕರ ಬಂಧನ: ಜ.22 ರಂದು ಬೆಂಗಳೂರು ಬಂದ್- ಮುಸ್ಲಿಂ ಸಂಘಟನೆ ಕರೆ
ನಿಲುವು ಬದಲಿಸಿದ ವಾಟ್ಸಾಪ್: ಸದ್ಯಕ್ಕೆ ಗೌಪ್ಯತಾ ನೀತಿ ಬದಲಾವಣೆಯಿಲ್ಲ
ಹಿಂದೂ ದೇವತೆಗಳನ್ನು ಅಪಮಾನಿಸಿದವರಿಗೆ ಸಚಿವ ಸ್ಥಾನ- ಯತ್ನಾಳ ಫುಲ್ ಗರಂ
ವಾಟ್ಸಾಪ್ ಬಳಕೆದಾರರಿಗೆ ಸೌದಿ ಹಣಕಾಸು ಸಚಿವಾಲಯ ಎಚ್ಚರಿಕೆ
ಬಸ್ ನಲ್ಲಿ ಕಿರುಕುಳ: ಯುವತಿಯ ಪೋಸ್ಟ್ ಸಾಮಾಜಿಕ ತಾಣದಲ್ಲಿ ವೈರಲ್