ದುಬೈ, ಜೂ.17: ಶಾಲಾ ಬಸ್ಸಿನಲ್ಲೇ ಉಳಿದುಕೊಂಡಿದ್ದ ಕೇರಳದ 6 ವರ್ಷದ ಬಾಲಕನೊಬ್ಬ ಹಲವು ಗಂಟೆಗಳ ಕಾಲ ಒಬ್ಬಂಟಿಯಾಗಿದ್ದು,ಬಿಸಿಲಿನ ತಾಪದಿಂದ ಮೃತ ಪಟ್ಟ ಘಟನೆ ಅಲ್ ಖೂಸ್ ನಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ಇಲ್ಲಿನ ಅಲ್ ಮನಾರ್ ಖುರ್ ಆನ್ ಸ್ಟಡೀ ಸೆಂಟರ್ ನ ವಿದ್ಯಾರ್ಥಿ, ಕೇರಳದ ತಲಶ್ಶೇರಿ ಮುಝುಪಿಲಂಗಾಡ್ ಫೈಝಲ್ ಎಂಬವರ ಮಗ ಮುಹಮ್ಮದ್ ಫರ್ಹಾನ್ ಮೃತ ಪಟ್ಟ ಬಾಲಕ.
ಬೆಳಿಗ್ಗೆ ಎಂಟರ ಸುಮಾರಿಗೆ ಶಾಲಾವರಣ ಪ್ರವೇಶಿಸಿದ ಬಸ್ಸಿನಿಂದ ಇತರ ವಿದ್ಯಾರ್ಥಿಗಳು ಇಳಿದರೂ ಪೈಸಲ್ ಇಳಿದಿರಲಿಲ್ಲ.
ಇದರ ಅರಿವು ಬಾರದೆ ಚಾಲಕ ಮತ್ತು ನಿರ್ವಾಹಕ ಬಸ್ಸಿನ ಬಾಗಿಲ ಬೀಗ ಹಾಕಿ ತೆರಳಿದ್ದರು. ಗಂಟೆಗಳ ನಂತರ ಬಾಗಿಲು ತೆರೆದಾಗ ಬಿಸಿಲಿಗೆ ಬಾಡಿ ಹೋಗಿದ್ದ ಎಳೆ ಬಾಲಕನ ಮರಣ ಸಂಭವಿಸಿತ್ತು.ಮಧ್ಯಾಹ್ನ 3ರವೇಳೆಗೆ ಬಾಲಕ ಮೃತಪಟ್ಟಿರುವ ಬಗ್ಗೆ ದೂರು ಲಭಿಸಿದ್ದಾಗಿ ದುಬೈ ಪೊಲೀಸರು ಹೇಳಿದ್ದಾರೆ.
“ಮಕ್ಕಳನ್ನು ಮರಳಿ ಮನೆಗೆ ಕರೆದೊಯ್ಯಲು ಚಾಲಕ ಬಸ್ಸು ತೆರೆದಾಗ ಈತ ಮೃತಪಟ್ಟಿರುವುದು ಕಂಡುಬಂದಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ವಿವರಿಸಿದ್ದಾರೆ. ಈತನ ಪೋಷಕರು ದೀರ್ಘಕಾಲದಿಂದ ದುಬೈ ನಿವಾಸಿಗಳು. ತಂದೆ ಫೈಝಲ್, ಕೇರಳ ಹಾಗೂ ದುಬೈನಲ್ಲಿ ವ್ಯಾಪಾರ ನಡೆಸುತ್ತಿದ್ದಾರೆ ಎನ್ನಲಾಗಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು