ದುಬೈ, ಜೂ.17: ಶಾಲಾ ಬಸ್ಸಿನಲ್ಲೇ ಉಳಿದುಕೊಂಡಿದ್ದ ಕೇರಳದ 6 ವರ್ಷದ ಬಾಲಕನೊಬ್ಬ ಹಲವು ಗಂಟೆಗಳ ಕಾಲ ಒಬ್ಬಂಟಿಯಾಗಿದ್ದು,ಬಿಸಿಲಿನ ತಾಪದಿಂದ ಮೃತ ಪಟ್ಟ ಘಟನೆ ಅಲ್ ಖೂಸ್ ನಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ಇಲ್ಲಿನ ಅಲ್ ಮನಾರ್ ಖುರ್ ಆನ್ ಸ್ಟಡೀ ಸೆಂಟರ್ ನ ವಿದ್ಯಾರ್ಥಿ, ಕೇರಳದ ತಲಶ್ಶೇರಿ ಮುಝುಪಿಲಂಗಾಡ್ ಫೈಝಲ್ ಎಂಬವರ ಮಗ ಮುಹಮ್ಮದ್ ಫರ್ಹಾನ್ ಮೃತ ಪಟ್ಟ ಬಾಲಕ.
ಬೆಳಿಗ್ಗೆ ಎಂಟರ ಸುಮಾರಿಗೆ ಶಾಲಾವರಣ ಪ್ರವೇಶಿಸಿದ ಬಸ್ಸಿನಿಂದ ಇತರ ವಿದ್ಯಾರ್ಥಿಗಳು ಇಳಿದರೂ ಪೈಸಲ್ ಇಳಿದಿರಲಿಲ್ಲ.
ಇದರ ಅರಿವು ಬಾರದೆ ಚಾಲಕ ಮತ್ತು ನಿರ್ವಾಹಕ ಬಸ್ಸಿನ ಬಾಗಿಲ ಬೀಗ ಹಾಕಿ ತೆರಳಿದ್ದರು. ಗಂಟೆಗಳ ನಂತರ ಬಾಗಿಲು ತೆರೆದಾಗ ಬಿಸಿಲಿಗೆ ಬಾಡಿ ಹೋಗಿದ್ದ ಎಳೆ ಬಾಲಕನ ಮರಣ ಸಂಭವಿಸಿತ್ತು.ಮಧ್ಯಾಹ್ನ 3ರವೇಳೆಗೆ ಬಾಲಕ ಮೃತಪಟ್ಟಿರುವ ಬಗ್ಗೆ ದೂರು ಲಭಿಸಿದ್ದಾಗಿ ದುಬೈ ಪೊಲೀಸರು ಹೇಳಿದ್ದಾರೆ.
“ಮಕ್ಕಳನ್ನು ಮರಳಿ ಮನೆಗೆ ಕರೆದೊಯ್ಯಲು ಚಾಲಕ ಬಸ್ಸು ತೆರೆದಾಗ ಈತ ಮೃತಪಟ್ಟಿರುವುದು ಕಂಡುಬಂದಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ವಿವರಿಸಿದ್ದಾರೆ. ಈತನ ಪೋಷಕರು ದೀರ್ಘಕಾಲದಿಂದ ದುಬೈ ನಿವಾಸಿಗಳು. ತಂದೆ ಫೈಝಲ್, ಕೇರಳ ಹಾಗೂ ದುಬೈನಲ್ಲಿ ವ್ಯಾಪಾರ ನಡೆಸುತ್ತಿದ್ದಾರೆ ಎನ್ನಲಾಗಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ