ಕಲ್ಲಿಕೋಟೆ: ಶೈಕ್ಷಣಿಕ ರಂಗದಲ್ಲಿ ಉತ್ತಮ ಗುಣಮಟ್ಟ ಹಾಗೂ ಆಧುನೀಕರಣದ ಸಾಧ್ಯತೆಗಳನ್ನು ಬಳಸಿಕೊಳ್ಳುವುದು ನಿರ್ಣಾಯಕವಾಗಿದೆ. ಈ ನಿಟ್ಟಿನಲ್ಲಿ ಮರ್ಕಝ್ ನೀಡುತ್ತಿರುವ ಕೊಡುಗೆಗಳು ಅಭಿನಂದನಾರ್ಹವಾಗಿದೆ ಎಂದು ಭಾರತೀಯ ರಾಜತಾಂತ್ರಿಕ ಹಾಗೂ ಪ್ರಧಾನ ಮಂತ್ರಿಯ ಮಾಜಿ ಸಲಹೆಗಾರರಾದ ದೀಪಕ್ ವೊಹ್ರಾ ಹೇಳಿದರು.

ಹೊಸ ಶೈಕ್ಷಣಿಕ ವರ್ಷದ ಅಂಗವಾಗಿ ಜಾಗತಿಕ ವಿದ್ಯಾ ಸಂಸ್ಥೆ ಜಾಮಿಯಾ ಮರ್ಕಝಿನಲ್ಲಿ ಆಯೋಜಿಸಿದ್ದ ‘ರೆಕಗ್ನಿಷನ್-19’ ಶೈಕ್ಷಣಿಕ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಮರ್ಕಝ್ ನ ಶೈಕ್ಷಣಿಕ ವಿಧಾನವು ಅದ್ಭುತವಾಗಿದೆ ಮತ್ತು ನಾಲೆಜ್ ಸಿಟಿಯಲ್ಲಿರುವ ವಿವಿಧ ವೈಜ್ಞಾನಿಕ ಆಧಾರಿತ ನಗರ ಯೋಜನೆಗಳು ಭಾರತದಲ್ಲೇ ವಿಶಿಷ್ಟವಾಗಿವೆ ಎಂದು ಅವರು ಹೇಳಿದರು. ಅನಾಥಾಶ್ರಮವನ್ನು ದೇಶದಲ್ಲಿ ಬೇರುಗಳನ್ನು ಹೊಂದಿರುವ ಜ್ಞಾನ ಕೇಂದ್ರವನ್ನಾಗಿ ಪರಿವರ್ತಿಸುವುದು ಬುದ್ಧಿವಂತ, ಉತ್ಸಾಹ ಮತ್ತು ಪ್ರಾಮಾಣಿಕ ನಾಯಕತ್ವದ ಫಲಿತಾಂಶವಾಗಿದೆ ಎಂದು ಶೈಕ್ಷಣಿಕ ರಂಗದಲ್ಲಿ ಮರ್ಕಝ್ ಸಂಸ್ಥೆಯ ಕ್ರಾಂತಿಯ ರುವಾರಿ ಕಾಂತಪುರಂ ಉಸ್ತಾದರ ಅಪ್ರತಿಮ ಸೇವೆಯನ್ನು ಈ ಮೊದಲೇ ಕಣ್ಣಾರೆ ಕಂಡು ಮನದಟ್ಟು ಮಾಡಿದ ದೀಪಕ್ ವೋಹ್ರಾರವರು ಎ.ಪಿ.ಉಸ್ತಾದರನ್ನು ಪ್ರಶಂಸಿದರು.

ಕನ್ನಡಕ್ಕೆ : ಡಿ.ಎ.ಮುಹಮ್ಮದ್ ಅಶ್ರಫ್ ಕೊಡಂಗಾಯಿ















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ