ಪುತ್ತೂರು: ಬನ್ನೂರಿನ ಬದ್ರಿಯಾ ಜುಮಾ ಮಸೀದಿಯ ಜಮಾಅತ್ತಿಗೆ ಒಳಪಟ್ಟ ಬಡ ಕುಟುಂಬದ ಮದುವೆಗೆ ಸುನ್ನೀ ಫ್ರೆಂಡ್ಸ್ ಬನ್ನೂರು ಜಿಸಿಸಿ ರಿಲೀಫ್ ಫಂಡ್ ಇದರ ವತಿಯಿಂದ 25 ಸಾವಿರ ರೂಪಾಯಿ ಧನ ಸಹಾಯ ನೀಡಲಾಯಿತು.
ಬನ್ನೂರಿನ ಸುನ್ನಿ ಸೆಂಟರಿನಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಾತನಾಡಿದ ಅಬ್ದುರ್ರಹ್ಮಾನ್ ಮದನಿ ಉಸ್ತಾದ್ ಬನ್ನೂರು ಅವರು,ಸಹಾಯ ನಿರೀಕ್ಷೆಯಲ್ಲಿರುವವರಿಗೆ ಸಹಾಯಹಸ್ತ ಚಾಚಿದರೆ ದ್ವಿಲೋಕದಲ್ಲೂ ಅದೊಂದು ಉತ್ತಮ ಪ್ರತಿಫಲಯುಕ್ತ ಸತ್ಕರ್ಮವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು. ಧನಸಹಾಯ ನೀಡಿ ಬಡಕುಟುಂಬದ ಕಣ್ಣೀರೊರೆಸಲು ಸಹಕರಿಸಿದ ಸಂಘಟನೆಯ ದಾನಿಗಳಿಗೆ ಅವರು ಪ್ರತ್ಯೇಕ ದುಆಃ ಮಾಡಿದರು.

ಈ ಸಂದರ್ಭದಲ್ಲಿ ಸುನ್ನೀ ಸೆಂಟರ್ ಅಧ್ಯಕ್ಷರಾದ ಫಾರೂಕ್ ಬನ್ನೂರು, ಎಸ್ ವೈ ಎಸ್ ಅಧ್ಯಕ್ಷರಾದ ಇಸ್ಮಾಯಿಲ್ ಹಾಜಿ ಅಕ್ಕರೆ, ಸುನ್ನೀ ಸೆಂಟರ್ ಪ್ರಧಾನ ಕಾರ್ಯದರ್ಶಿ ಹಮೀದ್ ಲಕ್ಕಿ ಸ್ಟಾರ್ ಬನ್ನೂರು, ಅಬ್ದುರ್ರಹ್ಮಾನ್ ಮದನಿ ಉಸ್ತಾದ್ ಬನ್ನೂರು, ಅಬ್ಬಾಸ್ (ಪ್ರೆಸ್) ಬನ್ನೂರು ಹಾಗೂ ಜಿಸಿಸಿ ಸುನ್ನೀ ಫ್ರೆಂಡ್ಸ್ ಸದಸ್ಯರಾದ ರಿಯಾಝ್ ಪಾಪ್ಲಿ ಬನ್ನೂರು ಅವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ