ಪುತ್ತೂರು: ಬನ್ನೂರಿನ ಬದ್ರಿಯಾ ಜುಮಾ ಮಸೀದಿಯ ಜಮಾಅತ್ತಿಗೆ ಒಳಪಟ್ಟ ಬಡ ಕುಟುಂಬದ ಮದುವೆಗೆ ಸುನ್ನೀ ಫ್ರೆಂಡ್ಸ್ ಬನ್ನೂರು ಜಿಸಿಸಿ ರಿಲೀಫ್ ಫಂಡ್ ಇದರ ವತಿಯಿಂದ 25 ಸಾವಿರ ರೂಪಾಯಿ ಧನ ಸಹಾಯ ನೀಡಲಾಯಿತು.
ಬನ್ನೂರಿನ ಸುನ್ನಿ ಸೆಂಟರಿನಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಾತನಾಡಿದ ಅಬ್ದುರ್ರಹ್ಮಾನ್ ಮದನಿ ಉಸ್ತಾದ್ ಬನ್ನೂರು ಅವರು,ಸಹಾಯ ನಿರೀಕ್ಷೆಯಲ್ಲಿರುವವರಿಗೆ ಸಹಾಯಹಸ್ತ ಚಾಚಿದರೆ ದ್ವಿಲೋಕದಲ್ಲೂ ಅದೊಂದು ಉತ್ತಮ ಪ್ರತಿಫಲಯುಕ್ತ ಸತ್ಕರ್ಮವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು. ಧನಸಹಾಯ ನೀಡಿ ಬಡಕುಟುಂಬದ ಕಣ್ಣೀರೊರೆಸಲು ಸಹಕರಿಸಿದ ಸಂಘಟನೆಯ ದಾನಿಗಳಿಗೆ ಅವರು ಪ್ರತ್ಯೇಕ ದುಆಃ ಮಾಡಿದರು.

ಈ ಸಂದರ್ಭದಲ್ಲಿ ಸುನ್ನೀ ಸೆಂಟರ್ ಅಧ್ಯಕ್ಷರಾದ ಫಾರೂಕ್ ಬನ್ನೂರು, ಎಸ್ ವೈ ಎಸ್ ಅಧ್ಯಕ್ಷರಾದ ಇಸ್ಮಾಯಿಲ್ ಹಾಜಿ ಅಕ್ಕರೆ, ಸುನ್ನೀ ಸೆಂಟರ್ ಪ್ರಧಾನ ಕಾರ್ಯದರ್ಶಿ ಹಮೀದ್ ಲಕ್ಕಿ ಸ್ಟಾರ್ ಬನ್ನೂರು, ಅಬ್ದುರ್ರಹ್ಮಾನ್ ಮದನಿ ಉಸ್ತಾದ್ ಬನ್ನೂರು, ಅಬ್ಬಾಸ್ (ಪ್ರೆಸ್) ಬನ್ನೂರು ಹಾಗೂ ಜಿಸಿಸಿ ಸುನ್ನೀ ಫ್ರೆಂಡ್ಸ್ ಸದಸ್ಯರಾದ ರಿಯಾಝ್ ಪಾಪ್ಲಿ ಬನ್ನೂರು ಅವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ