ಪುತ್ತೂರು: ಬನ್ನೂರಿನ ಬದ್ರಿಯಾ ಜುಮಾ ಮಸೀದಿಯ ಜಮಾಅತ್ತಿಗೆ ಒಳಪಟ್ಟ ಬಡ ಕುಟುಂಬದ ಮದುವೆಗೆ ಸುನ್ನೀ ಫ್ರೆಂಡ್ಸ್ ಬನ್ನೂರು ಜಿಸಿಸಿ ರಿಲೀಫ್ ಫಂಡ್ ಇದರ ವತಿಯಿಂದ 25 ಸಾವಿರ ರೂಪಾಯಿ ಧನ ಸಹಾಯ ನೀಡಲಾಯಿತು.
ಬನ್ನೂರಿನ ಸುನ್ನಿ ಸೆಂಟರಿನಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಾತನಾಡಿದ ಅಬ್ದುರ್ರಹ್ಮಾನ್ ಮದನಿ ಉಸ್ತಾದ್ ಬನ್ನೂರು ಅವರು,ಸಹಾಯ ನಿರೀಕ್ಷೆಯಲ್ಲಿರುವವರಿಗೆ ಸಹಾಯಹಸ್ತ ಚಾಚಿದರೆ ದ್ವಿಲೋಕದಲ್ಲೂ ಅದೊಂದು ಉತ್ತಮ ಪ್ರತಿಫಲಯುಕ್ತ ಸತ್ಕರ್ಮವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು. ಧನಸಹಾಯ ನೀಡಿ ಬಡಕುಟುಂಬದ ಕಣ್ಣೀರೊರೆಸಲು ಸಹಕರಿಸಿದ ಸಂಘಟನೆಯ ದಾನಿಗಳಿಗೆ ಅವರು ಪ್ರತ್ಯೇಕ ದುಆಃ ಮಾಡಿದರು.

ಈ ಸಂದರ್ಭದಲ್ಲಿ ಸುನ್ನೀ ಸೆಂಟರ್ ಅಧ್ಯಕ್ಷರಾದ ಫಾರೂಕ್ ಬನ್ನೂರು, ಎಸ್ ವೈ ಎಸ್ ಅಧ್ಯಕ್ಷರಾದ ಇಸ್ಮಾಯಿಲ್ ಹಾಜಿ ಅಕ್ಕರೆ, ಸುನ್ನೀ ಸೆಂಟರ್ ಪ್ರಧಾನ ಕಾರ್ಯದರ್ಶಿ ಹಮೀದ್ ಲಕ್ಕಿ ಸ್ಟಾರ್ ಬನ್ನೂರು, ಅಬ್ದುರ್ರಹ್ಮಾನ್ ಮದನಿ ಉಸ್ತಾದ್ ಬನ್ನೂರು, ಅಬ್ಬಾಸ್ (ಪ್ರೆಸ್) ಬನ್ನೂರು ಹಾಗೂ ಜಿಸಿಸಿ ಸುನ್ನೀ ಫ್ರೆಂಡ್ಸ್ ಸದಸ್ಯರಾದ ರಿಯಾಝ್ ಪಾಪ್ಲಿ ಬನ್ನೂರು ಅವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ