ಮದೀನಾ: ಅಲ್ ಖಾದಿಸ ಎಜುಕೇಶನಲ್ ಅಖಾಡಮಿ ಕಾವಳಕಟ್ಟೆ ಇದರ ಮದೀನಾ ಮುನವ್ವರ ಘಟಕ ಸಮಿತಿಯ ವತಿಯಿಂದ ಮದೀನಾ ಮುನವ್ವರದ ಕೆ.ಸಿ.ಎಫ್ ಭವನದಲ್ಲಿ “ಅಲ್ ಖಾದಿಸ ಮೀಟ್” ನಡೆಸಲಾಯಿತು
ಕಾರ್ಯಕ್ರಮವನ್ನು ಅಶ್ರಫ್ ಸಖಾಫಿ ನೂಜಿ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಸಂಸ್ಥೆಯ ಪ್ರಾಂಶುಪಾಲರು. ಹಾಗೂ SSF ರಾಜ್ಯ ಸಮಿತಿಯ ಉಪಾಧ್ಯಕ್ಷರಾದ ಬಹು: ಸುಫ್ಯಾನ್ ಸಖಾಫಿ ಮಾತನಾಡಿ, ಸಂಸ್ಥೆಯ ಕಾರ್ಯವೈಖರಿಯನ್ನು ವಿವರಿಸುತ್ತಾ ಸಂಸ್ಥೆಯಲ್ಲಿ ರಾಜ್ಯದ 26 ಜಿಲ್ಲೆಗಳ ಬಡ ವಿದ್ಯಾರ್ಥಿಗಳು ಧಾರ್ಮಿಕ, ಲೌಕಿಕ ಶಿಕ್ಷಣ ಪಡೆಯುತ್ತಿದ್ದು, ವಿಶಾಲವಾದ 30 ಎಕರೆಗಳಷ್ಟು ಜಾಗ ಸಂಸ್ಥೆಗಿದೆ. ಇದಕ್ಕೆಲ್ಲಾ ಕಾರಣ, ಹಿತೈಷಿಗಳ ಸಹಾಯ ಸಂಸ್ಥೆಯ ಶಿಲ್ಪಿ ಕಾವಲ್ ಕಟ್ಟೆ ಹಝ್ರತ್ ಅವರ ನಿಷ್ಕಳಂಕ ನೇತೃತ್ವವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಘಟಕಾಧ್ಯಕ್ಷರಾದ ಸುಲೈಮಾನ್ ತುರ್ಕಳಿಕೆ ,ಉಪಾಧ್ಯಕ್ಷರಾದ ರಫೀಖ್ ಕಾಪು, ಕಾರ್ಯದರ್ಶಿ ಅಬ್ದುಲ್ ಜಬ್ಬಾರ್ ಕಾವಳಕಟ್ಟೆ, ಸಂಸ್ಥೆಯ ಹಿತೈಷಿಗಳಾದ ಅಶ್ರಫ್ ಕಿನ್ಯ, ಅಬ್ದುಲ್ ರಝ್ಝಾಖ್ ಅಳಕೆಮಜಲ್,ಅಬೂಬಕ್ಕರ್ ಉದ್ದಬೆಟ್ಟು ಹಾಗೂ ಮತ್ತಿತರರು ಭಾಗವಹಿಸಿದ್ದರು.
ಅಲ್ ಖಾದಿಸ ಎಜುಕೇಶನಲ್ ಅಕಾಡಮಿ ಸೌದಿ ಅರೇಬಿಯಾ ಆರ್ಗನೈಸರ್ ಯೂಸುಫ್ ಮದನಿ ಕೊಯ್ಯರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ವರದಿ:- ಹುಸೈನಾರ್ ಮದೀನಾ















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ