ಮೈಸೂರು, ಜು.2:- ಅಲ್ಪಸಂಖ್ಯಾತ ಸಮು ದಾಯಕ್ಕೆ ಸೇರಿದ ಶಾಸಕರಿಗೆ ಕಾಂಗ್ರೆಸ್ ಪಕ್ಷದಲ್ಲಿ ಬೆಲೆಯೇ ಇಲ್ಲದಂತಾಗಿದೆ ಎಂದು ಶಾಸಕ ತನ್ವೀರ್ಸೇಠ್ ಅಸಮಾಧಾನ ಹೊರಹಾಕಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಾಡು ಕೇಳುವವರು, ಹೇಳುವವರು ಇಲ್ಲದಂತಾಗಿದೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದಲ್ಲಿ ನಮ್ಮ ಪಾಡು ಹೇಗಿದೆ ಎಂದರೆ ನಮಗೆ ಇಲ್ಲಿ ಬೆಲೆ ಇಲ್ಲ. ಸ್ಥಾನಮಾನ ಇಲ್ಲ. ಇನ್ನು ಬಿಜೆಪಿಯವರು ನಮಗೆ ಬೆಲೆ ಕಟ್ಟಲ್ಲ. ಒಟ್ಟಿನಲ್ಲಿ ನಾವು ಸಂದಿಗ್ಧ ಪರಿಸ್ಥಿತಿಯಲ್ಲಿ ದಿನ ದೂಡುವಂತಾಗಿದೆ ಎಂದು ತಿಳಿಸಿದರು.
ಇಬ್ಬರು ಶಾಸಕರು ರಾಜೀನಾಮೆ ನೀಡಿರುವ ಬಗ್ಗೆ ಪ್ರತಿಕ್ರಿಯಿ ಸಿದ ಅವರು, ಇದು ರಾಜ್ಯ ರಾಜಕೀಯದಲ್ಲಿ ಅಲ್ಲೋಲ- ಕಲ್ಲೋಲ ಸ್ಥಿತಿ ನಿರ್ಮಿಸಿದಂತಾಗಿದೆ. ಜನ ಪ್ರತಿನಿಧಿಗಳನ್ನು ಮಾರಾಟದ ವಸ್ತುವಾಗಿ ನೋಡುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಹಾಗೆಂದು ಸರ್ಕಾರ ಉರುಳುತ್ತದೆ ಎಂದು ಹೇಳುವುದು ತಪ್ಪು ಎಂದರು.
ಇಬ್ಬರು ಶಾಸಕರು ವೈಯಕ್ತಿಕ ಕಾರಣಗಳಿಗೆ ರಾಜೀನಾಮೆ ನೀಡಿದ್ದಾರೆ. ಕೇವಲ ಇಬ್ಬರು ಶಾಸಕರ ರಾಜೀನಾಮೆಯಿಂದ ಸರ್ಕಾರವನ್ನು ಉರುಳಿಸುವುದು ಸಾಧ್ಯವಿಲ್ಲ ಎಂದು ತನ್ವೀರ್ಸೇಠ್ ಹೇಳಿದರು.
ಶಾಸಕರು ಪಕ್ಷಾಂತರ ಮಾಡುವುದರಿಂದ ಜನರಲ್ಲಿ ಬೇರೆ ರೀತಿಯ ಭಾವನೆ ಉಂಟು ಮಾಡುತ್ತದೆ. ಹಾಗಾಗಿ ಜನರ ಮತಕ್ಕೆ ಬೆಲೆ ಕೊಡೋಣ ಎಂದು ತಿಳಿಸಿದರು. ಕೆಪಿಸಿಸಿ ಅಧ್ಯಕ್ಷ ದಿನೇಶ್ಗುಂಡೂರಾವ್ ರಿವರ್ಸ್ ಆಪರೇಷನ್ ಮಾಡ್ತೀನಿ ಅಂದಿದ್ದಾರಲ್ಲ ಎಂಬ ಪ್ರಶ್ನೆಗೆ, ತನ್ವೀರ್ಸೇಠ್ ಆಪರೇಷನ್, ರಿವರ್ಸ್ ಅಪರೇಷನ್ ಎರಡೂ ತಪ್ಪು ಎಂದು ಗರಂ ಆಗಿ ಹೇಳಿದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ