ಕತಾರ್: ಬೇಸಿಗೆಯ ಉಷ್ಣತೆ ಏರಿರುವ ಕಾರಣ ಏರ್ಪಡಿಸಲಾದ ಮಧ್ಯಾಹ್ನ ವಿಶ್ರಮವು ಪತ್ರಿಕೆ, ಆಹಾರ ವಿತರಣೆ ವಲಯದಲ್ಲಿ ಕೆಲಸ ಮಾಡುವವರಿಗೂ ಅನ್ವಯಿಸುತ್ತದೆ ಎಂದು ಅಧಿಕೃತರು ತಿಳಿಸಿದ್ದಾರೆ. ಕಾನೂನು ಉಲ್ಲಂಘಿಸಿ, ಇಂತಹ ವಲಯದಲ್ಲಿ ಕೆಲಸ ಮಾಡಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಸಚಿವಾಲಯದ ವಕ್ತಾರ ತಿಳಿಸಿದ್ದಾರೆ.
ಜೂನ್ 15ರಿಂದ ಅಲ್ಲಿ ಮಧ್ಯಾಹ್ನ ವಿಶ್ರಾತಿ ಸಮಯವು ಜಾರಿಗೆ ಬಂದಿದೆ. ಆ ಪ್ರಕಾರ ಪೂರ್ವಾಹ್ನ 11:30ಯಿಂದ ಅಪರಾಹ್ನ 3:30ವರೆಗೆ ಹೊರಗೆ ಕೆಲಸ ಮಾಡುವ ಕಾರ್ಮಿಕರಿಗೆ ಬಿಡುವು ನೀಡಬೇಕಾಗುತ್ತದೆ.
ಆದರೆ, ಪತ್ರಿಕೆ ವಿತರಣೆ, ಹೊಟೆಲ್, ಕಫ್ಟೇರಿಯಾ ಮುಂತಾದವುಗಳ ಹೋಂ ಡೆಲಿವರಿ ಕಾರ್ಮಿಕರು ಈ ಸಮಯಗಳಲ್ಲಿ ಕೆಲಸ ಮಾಡುತ್ತಿರುವ ಬಗ್ಗೆ ವಿವಿಧ ಪತ್ರಿಕೆ ಮತ್ತು ಪೋರ್ಟಲ್ ಮೂಲಕ ವರದಿಯಾಗಿದ್ದವು. ಆ ಹಿನ್ನೆಲೆಯಲ್ಲಿ ಲೇಬರ್ ಸೋಶಿಯಲ್ ಅಫೇರ್ಸ್ ಸಚಿವಾಲಯದ ವೃತ್ತಿ ಸುರಕ್ಷಾ ಆರೋಗ್ಯ ವಿಭಾಗದ ಉನ್ನತ ಅಧಿಕಾರಿ ಜಾಬಿರ್ ಅಲಿ ಅಲ್ ಮಾರಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಮಧ್ಯಾಹ್ನ ವಿಶ್ರಾಂತಿ ಸಮಯಕ್ಕೆ ಸಂಬಂಧಿಸಿದಂತೆ ಸಚಿವಾಲಯ ಸುತ್ತೋಲೆ ಹೊರಡಿಸಿದೆ. ಆ ಪ್ರಕಾರ ಎಲ್ಲಾ ಕಾರ್ಮಿಕರಿಗೂ ಇದು ಅನ್ವಯಿಸುತ್ತಿದ್ದು, ಅವರಿಗೆ ಅವಶ್ಯಕವಾದ ನೀರು, ಉಷ್ಣತೆಯಿಂದ ರಕ್ಷಣೆ ನೀಡಬಲ್ಲ ಬಾರ ಕಡಿಮೆ ಇರುವ ವಸ್ತ್ರಗಳನ್ನು ನೀಡಲು ಕಂಪೆನಿಗಳಿಗೆ ಬಾಧ್ಯತೆ ಇದೆ.
ಕಂಪನಿಗಳು ಕಾನೂನು ಪಾಲಿಸುವುದನ್ನು ಖಾತರಿಪಡಿಸಲು ಪ್ರತ್ಯೇಕ ಅಧಿಕಾರಿಗಳನ್ನು ನೇಮಕಗೊಳಿಸಲಾಗಿದೆ. ಅಪರಾಧ ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು.
ತೆರೆದ ಪ್ರದೇಶಗಳಲ್ಲಿ ಕೆಲಸ ಮಾಡುವವರನ್ನು ಕಂಡುಬಂದಲ್ಲಿ ಅವರನ್ನು ಕೆಲಸದಿಂದ ವಿರಾಮ ನೀಡಿ , ಹವಾನಿಯಂತ್ರಿತ ಸ್ಥಳಕ್ಕೆ ವರ್ಗಾವಣೆ ಮಾಡಲಾಗುವುದು. ಅಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಈ ಬಗ್ಗೆ ಸಚಿವಾಲಯದ ವತಿಯಿಂದ ಜಾಗೃತಿ ಮೂಡಿಸಲಾಗುತ್ತಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು