ಕತಾರ್: ಬೇಸಿಗೆಯ ಉಷ್ಣತೆ ಏರಿರುವ ಕಾರಣ ಏರ್ಪಡಿಸಲಾದ ಮಧ್ಯಾಹ್ನ ವಿಶ್ರಮವು ಪತ್ರಿಕೆ, ಆಹಾರ ವಿತರಣೆ ವಲಯದಲ್ಲಿ ಕೆಲಸ ಮಾಡುವವರಿಗೂ ಅನ್ವಯಿಸುತ್ತದೆ ಎಂದು ಅಧಿಕೃತರು ತಿಳಿಸಿದ್ದಾರೆ. ಕಾನೂನು ಉಲ್ಲಂಘಿಸಿ, ಇಂತಹ ವಲಯದಲ್ಲಿ ಕೆಲಸ ಮಾಡಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಸಚಿವಾಲಯದ ವಕ್ತಾರ ತಿಳಿಸಿದ್ದಾರೆ.
ಜೂನ್ 15ರಿಂದ ಅಲ್ಲಿ ಮಧ್ಯಾಹ್ನ ವಿಶ್ರಾತಿ ಸಮಯವು ಜಾರಿಗೆ ಬಂದಿದೆ. ಆ ಪ್ರಕಾರ ಪೂರ್ವಾಹ್ನ 11:30ಯಿಂದ ಅಪರಾಹ್ನ 3:30ವರೆಗೆ ಹೊರಗೆ ಕೆಲಸ ಮಾಡುವ ಕಾರ್ಮಿಕರಿಗೆ ಬಿಡುವು ನೀಡಬೇಕಾಗುತ್ತದೆ.
ಆದರೆ, ಪತ್ರಿಕೆ ವಿತರಣೆ, ಹೊಟೆಲ್, ಕಫ್ಟೇರಿಯಾ ಮುಂತಾದವುಗಳ ಹೋಂ ಡೆಲಿವರಿ ಕಾರ್ಮಿಕರು ಈ ಸಮಯಗಳಲ್ಲಿ ಕೆಲಸ ಮಾಡುತ್ತಿರುವ ಬಗ್ಗೆ ವಿವಿಧ ಪತ್ರಿಕೆ ಮತ್ತು ಪೋರ್ಟಲ್ ಮೂಲಕ ವರದಿಯಾಗಿದ್ದವು. ಆ ಹಿನ್ನೆಲೆಯಲ್ಲಿ ಲೇಬರ್ ಸೋಶಿಯಲ್ ಅಫೇರ್ಸ್ ಸಚಿವಾಲಯದ ವೃತ್ತಿ ಸುರಕ್ಷಾ ಆರೋಗ್ಯ ವಿಭಾಗದ ಉನ್ನತ ಅಧಿಕಾರಿ ಜಾಬಿರ್ ಅಲಿ ಅಲ್ ಮಾರಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಮಧ್ಯಾಹ್ನ ವಿಶ್ರಾಂತಿ ಸಮಯಕ್ಕೆ ಸಂಬಂಧಿಸಿದಂತೆ ಸಚಿವಾಲಯ ಸುತ್ತೋಲೆ ಹೊರಡಿಸಿದೆ. ಆ ಪ್ರಕಾರ ಎಲ್ಲಾ ಕಾರ್ಮಿಕರಿಗೂ ಇದು ಅನ್ವಯಿಸುತ್ತಿದ್ದು, ಅವರಿಗೆ ಅವಶ್ಯಕವಾದ ನೀರು, ಉಷ್ಣತೆಯಿಂದ ರಕ್ಷಣೆ ನೀಡಬಲ್ಲ ಬಾರ ಕಡಿಮೆ ಇರುವ ವಸ್ತ್ರಗಳನ್ನು ನೀಡಲು ಕಂಪೆನಿಗಳಿಗೆ ಬಾಧ್ಯತೆ ಇದೆ.
ಕಂಪನಿಗಳು ಕಾನೂನು ಪಾಲಿಸುವುದನ್ನು ಖಾತರಿಪಡಿಸಲು ಪ್ರತ್ಯೇಕ ಅಧಿಕಾರಿಗಳನ್ನು ನೇಮಕಗೊಳಿಸಲಾಗಿದೆ. ಅಪರಾಧ ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು.
ತೆರೆದ ಪ್ರದೇಶಗಳಲ್ಲಿ ಕೆಲಸ ಮಾಡುವವರನ್ನು ಕಂಡುಬಂದಲ್ಲಿ ಅವರನ್ನು ಕೆಲಸದಿಂದ ವಿರಾಮ ನೀಡಿ , ಹವಾನಿಯಂತ್ರಿತ ಸ್ಥಳಕ್ಕೆ ವರ್ಗಾವಣೆ ಮಾಡಲಾಗುವುದು. ಅಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಈ ಬಗ್ಗೆ ಸಚಿವಾಲಯದ ವತಿಯಿಂದ ಜಾಗೃತಿ ಮೂಡಿಸಲಾಗುತ್ತಿದೆ.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ