ಪುತ್ತೂರು:ಕಾಲೇಜು ಸಮವಸ್ತ್ರ ಧರಿಸಿರುವ ವಿದ್ಯಾರ್ಥಿನಿಗೆ ಗಾಂಜಾ ನೀಡಿ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಕಾರೊಂದರಲ್ಲಿ ಈ ಘಟನೆ ನಡೆದಿದ್ದು,ಇದರ ದೃಶ್ಯಾವಳಿಯ ವೀಡಿಯೋ ತುಣುಕು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.ಇದೊಂದು ಗ್ಯಾಂಗ್ ರೇಪ್ ಪ್ರಕರಣವಾಗಿದ್ದು,ವಿದ್ಯಾರ್ಥಿಗೆ ಮಾದಕ ದ್ರವ್ಯ ವಸ್ತು ನೀಡಿ ಅತ್ಯಾಚಾರ ಎಸಗಲಾಗಿದೆ ಎಂದು ಹೇಳಲಾಗುತ್ತಿದೆ.
ಇದರ ಬಗ್ಗೆ ಸೂಕ್ತ ತನಿಖೆಯಾಗಬೇಕಿದ್ದು, ಆರೋಪಿಗಳಿಗೆ ಕಾನೂನಿನಡಿಯಲ್ಲಿ ಶೀಘ್ರವಾಗಿ ಶಿಕ್ಷೆ ಜಾರಿಯಾಗಬೇಕಿದೆ.
ಕ್ಯಾಂಪಸ್ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ವತಿಯಿಂದ ಈ ಹಿಂದೆ ರಾಜ್ಯದಾದ್ಯಂತ ಮಾದಕ ದ್ರವ್ಯ ಜಾಗೃತಾ ಅಭಿಯಾನ ಹಾಗೂ ಸಮಾವೇಶಗಳು ನಡೆದಿದ್ದು ಇತರ ಸಂಘ ಸಂಸ್ಥೆಗಳು ಈ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ವಿಶೇಷ ಅಭಿಯಾನ ನಡೆಸಬೇಕಿದೆ.
ಪುತ್ತೂರು ಅತ್ಯಾಚಾರ ಅಪರಾಧಿಗಳಿಗೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ಕಾಲೇಜು ಕ್ಯಾಂಪಸ್ ಗಳು ಇಂಥಹಾ ಸಾಮೂಹಿಕ ಅತ್ಯಾಚಾರಗಳ ಕೇಂದ್ರವಾಗಿ ಮಾರ್ಪಾಡಾಗುವುದರಲ್ಲಿ ಸಂಶಯವಿಲ್ಲ. ಇಂಥಹ ಪ್ರಕರಣಗಳನ್ನು ಮಾದ್ಯಮಗಳು ಧರ್ಮ, ಜಾತಿ, ಸಂಘಟನೆ ರಾಜಕೀಯ ನೋಡದೆ ನಿಜಸ್ಥಿತಿಯನ್ನು ಬಹಿರಂಗಗೊಳಿಸಬೇಕು ಎಂದು SSF ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ಅಲೀ ತುರ್ಕಳಿಕ್ಕೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ