ಬೆಂಗಳೂರು: ಎಸ್ಸೆಸ್ಸೆಫ್ ರಾಷ್ಟ್ರೀಯ ಸಮಿತಿ ವತಿಯಿಂದ ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ಹಾಗೂ ಜಿಲ್ಲಾ ಸಮಿತಿ ಸದಸ್ಯರನ್ನು ಸೇರಿಸಿ,ಇಂ\nತಿಝಾಮ್ ರಾಜ್ಯ ಮಟ್ಟದ ನಾಯಕರ ಸಮ್ಮಿಟ್ ಕಾರ್ಯಕ್ರಮವು ಎಸ್ಸೆಸ್ಸೆಫ್ ರಾಷ್ಟ್ರೀಯ ಅಧ್ಯಕ್ಷ ಶೌಕತ್ ನಯೀಮಿರವರ ಅಧ್ಯಕ್ಷತೆಯಲ್ಲಿ ಬೆಂಗಳೂರ್ ಐ.ಇ.ಬಿ.ಐ ಕಛೇರಿಯಲ್ಲಿ ನಡೆಯಿತು.
ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಸಯ್ಯದ್ ಉಮ್ಮರ್ ಅಸ್ಸಖಾಫ್ ಮದನಿ ತಂಙಳ್ ಮನ್ಶರ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಎಸ್ಸೆಸ್ಸೆಫ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ ಫಾರೂಖ್ ನಯೀಮಿ ಅಲ್ ಬುಖಾರಿರವರು ತರಗತಿಯನ್ನು ನಡೆಸಿದರು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ರಾಜ್ಯ ಉಪಾಧ್ಯಕ್ಷ ಖಾಝಿ ಗುಲಾಮ್ ಹುಸೈನ್ ನೂರಿ,ಕೋಶಾಧಿಕಾರಿ ರವೂಫ್ ಖಾನ್ ಕುಂದಾಪುರ,ರಾಜ್ಯ ಕಾರ್ಯದರ್ಶಿಗಳಾದ ಹಾಫಿಳ್ ಯಾಕೂಬ್ ಸ ಅದಿ ನಾವೂರು,ಸಿರಾಜುದ್ದೀನ್ ಸಖಾಫಿ ಕನ್ಯಾನ,ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು,ಹುಸೈನ್ ಸ ಅದಿ ಹೊಸ್ಮಾರ್,ಮುಸ್ತಫಾ ನಯೀಮಿ ಮೋಂಟುಗೋಳಿ,ಅಶ್ರಫ್ ರಝಾ ಅಂಜದಿ,ನವಾಝ್ ಭಟ್ಕಳ ಮೊದಲಾದವರು ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ರಾಷ್ಟ್ರೀಯ ಕಾರ್ಯದರ್ಶಿ ಶರೀಫ್ ಮಾಸ್ಟರ್ ಬೆಂಗಳೂರು ಸ್ವಾಗತಿಸಿ,ಕೊನೆಗೆ ವಂದಿಸಿದರು.