ರಿಯಾದ್: ಸಾಂತ್ವನ ರಂಗದಲ್ಲಿ ತನ್ನದೇ ಆದ ಛಾಪು ಮೂಡಿಸಿದ ಕೆ.ಸಿ.ಎಫ್ ತನ್ನ ಸದಸ್ಯರಿಗಾಗಿ ಆರ್ಥಿಕ ಸಹಾಯ ನೀಡುವ ವಿಶಿಷ್ಟ ಯೋಜನೆಯಾಗಿದೆ MRF. ಕೆ.ಸಿ.ಎಫ್ ಸೌದಿ ಅರೇಬಿಯಾದಾದ್ಯಂತ ಜುಲೈ 5ರಂದು ಎಲ್ಲಾ ಝೋನ್”ಗಳಲ್ಲಿ ಏಕಕಾಲದಲ್ಲಿ ಈ ಯೋಜನೆಗೆ ಪ್ರಾಯೋಗಿಕವಾಗಿ ಚಾಲನೆ ನೀಡಲಾಯಿತು.
ಕೆ.ಸಿ.ಎಫ್ ಅಲ್ ಖಸೀಂ ಝೋನ್” ಅಧೀನದಲ್ಲಿ ನಡೆದ ಕಾರ್ಯಕ್ರಮವು ಬಹಳ ಅದ್ದೂರಿಯಾಗಿ ನಡೆಯಿತು ಬುರೈದ ಸೆಕ್ಟರ್ ಅಧ್ಯಕ್ಷರಾದ ಅಬ್ದುಲ್ ಕರೀಂ ಇಮ್ದಾದಿ ಉಸ್ತಾದರ ದುವಾದೊಂದಿಗೆ
ಝೋನ್” ಅಧ್ಯಕ್ಷರಾದ ಅಬ್ದುಲ್ ಖಯ್ಯೂಂ ಉಸ್ತಾದರ ಆಧ್ಯಕ್ಷತೆಯಲ್ಲಿ ಬಹು ಶರೀಫ್ ಅಮಾನಿ ಉಸ್ತಾದ್ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾದ ICF ನೇತಾರ ಮುಹಮ್ಮದ್ ಕೊಪ್ಪ ಹಾಗೂ OICC ನೇತಾರ ಅಬ್ದುಲ್ ಲತೀಫ್ ಶೇರಿಯವರು MRF ಸಾಂತ್ವನ ನಿಧಿಗೆ ಅದಿಕೃತವಾಗಿ ಚಾಲನೆ ನೀಡಿದರು.
MRF ಸಾಂತ್ವನ ನಿಧಿಯ ಅಗತ್ಯತೆ ಮತ್ತು ಅನಿವಾರ್ಯತೆಯ ಬಗ್ಗೆ
ಕೆ.ಸಿ.ಎಫ್ ಸೌದಿ ರಾಷ್ಟ್ರಿಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಜನಾಬ್ ಸಾಲಿ ಬೆಳ್ಳಾರೆ ಸವಿವರವಾಗಿ ವಿವರಿಸಿದರು. ಕೆ.ಸಿ.ಎಫ್ ಅಲ್ ಖಸೀಂ ಝೋನ್” ಅಧೀನದ ಸೆಕ್ಟರ್, ಯೂನಿಟ್’ಗಳ ನೇತಾರರು ಹಾಗೂ ಕಾರ್ಯಕರ್ತರುಗಳು ಬಾಗವಹಿಸಿದ್ದರು.
ಬಶೀರ್ ಕನ್ಯಾನ ಸ್ವಾಗತಿಸಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ