ಬೆಂಗಳೂರು: ಮೈತ್ರಿ ಸರ್ಕಾರದ ಅತೃಪ್ತ ಶಾಸಕರು ರಾಜೀನಾಮೆ ನೀಡಿರುವುದಾಗಿ ಗಮನಕ್ಕೆ ಬಂದಿದೆ ಆದರೆ,ಇದರಲ್ಲಿ ನಮ್ಮ ಪಾತ್ರ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಸಮ್ಮಿಶ್ರ ಸರಕಾರದ ಕಾಂಗ್ರೆಸ್ ಹಾಗೂ ಜೆಡಿಎಸ್ನ ಹಲವು ಶಾಸಕರು ರಾಜೀನಾಮೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಯಡಿಯೂರಪ್ಪ, ಬಹಳ ಜನ ಶಾಸಕರು ರಾಜೀನಾಮೆ ಕೊಟ್ಟಿರುವುದು ಗೊತ್ತಾಗಿದೆ. ಇದರಲ್ಲಿ ನಮ್ಮ ಪಾತ್ರ ಇಲ್ಲ. ಮುಂದೇನು ಬೆಳವಣಿಗೆ ಆಗುತ್ತೆ ಅಂತ ಕಾದು ನೋಡೋಣ. ಇವತ್ತು ಯಾರು ರಾಜೀನಾಮೆ ಕೊಟ್ಟಿದ್ದಾರೋ, ಮುಂದೆ ಅವರೇನು ನಿಲುವು ತೆಗೆದುಕೊಳ್ಳುತ್ತಾರೋ ಅದರ ಆಧಾರದ ಮೇಲೆ ರಾಜಕೀಯ ಭವಿಷ್ಯ ನಿಂತಿದೆ. ಅದಕ್ಕೆ ನಾನು ಇಷ್ಟು ಬೇಗ ಪ್ರತಿಕ್ರಿಯೆ ಕೊಡೋದಿಲ್ಲ ಎಂದಿದ್ದಾರೆ.
ಜನರು ಕೂಡ ರಾಜ್ಯ ಸಕಾರದ ಮೇಲೆ ನಂಬಿಕೆ ಕಳೆದುಕೊಳ್ಳುತ್ತಿದ್ದಾರೆ. ಅನಿರೀಕ್ಷಿತವಾಗಿ ಶಾಸಕರು ರಾಜಿನಾಮೆ ಕೊಡ್ತಿದ್ದಾರೆ. ಇದೆಲ್ಲವನ್ನು ನಾನೂ ಕೂಡ ಗಮನಿಸ್ತಾ ಇದ್ದೇನೆ. ಮುಂದೇನು ಅವರು ನಿಲುವು ತೆಗೆದುಕೊಳ್ಳುತ್ತಾರೊ ಕಾದು ನೋಡೊಣ ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಇನ್ನಷ್ಟು ಸುದ್ದಿಗಳು
ವಾಟ್ಸಾಪ್ ಬಳಕೆದಾರರಿಗೆ ಸೌದಿ ಹಣಕಾಸು ಸಚಿವಾಲಯ ಎಚ್ಚರಿಕೆ
ಬಸ್ ನಲ್ಲಿ ಕಿರುಕುಳ: ಯುವತಿಯ ಪೋಸ್ಟ್ ಸಾಮಾಜಿಕ ತಾಣದಲ್ಲಿ ವೈರಲ್
ವಾಟ್ಸ್ಆ್ಯಪ್ ಹೊಸ ಗೌಪ್ಯತೆ ನೀತಿ: ದೆಹಲಿ ಹೈಕೋರ್ಟ್ನಲ್ಲಿ ಅರ್ಜಿ
ಖುರ್ಆನ್ ವಿರುದ್ಧ ಮತಿಗೆಟ್ಟ ಹೇಳಿಕೆ ನೀಡಿದ ಸ್ವಾಮೀಜಿ- ಕಠಿಣ ಕ್ರಮಕ್ಕೆ ಮುಸ್ಲಿಂ ಒಕ್ಕೂಟ ಆಗ್ರಹ
ಝಂಝಂ ಲೇಬಲಿನಲ್ಲಿ ಸಾದಾ ನೀರು ವಿತರಣೆ – ವಿದೇಶೀಯರ ಬಂಧನ
ಅತೃಪ್ತರು ಇಲ್ಲ ಸಲ್ಲದ ಆರೋಪ ಮಾಡಬೇಡಿ, ಕೇಂದ್ರಕ್ಕೆ ದೂರು ನೀಡಿ- ಬಿಎಸ್ ವೈ