ಪುತ್ತೂರು: ‘ಹೆಣ್ಣನ್ನು ದೇವತೆಯಂತೆ ಪೂಜಿಸಬೇಕೆಂದು ಹೇಳಿಕೊಡಲಾಗುತ್ತದೆ ಎಂದು ಎದೆ ತಟ್ಟಿಕೊಳ್ಳುವವರ ವಿಚಾರ ಕೇಂದ್ರವಾದ ಆರ್ಎಸ್ಎಸ್ನ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಬೈಠಕ್ ನಡೆಯುವ ಸ್ಥಳವೇ ಈಗ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳ ಸ್ಥಳವಾಗಿ ಮೂಡಿ ಬಂದಿದೆ’ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅವರು ಟೀಕಿಸಿದರು.
ಪುತ್ತೂರಿನಲ್ಲಿ ನಡೆದ ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಮತ್ತು ದಲಿತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಶನಿವಾರ ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಖಂಡನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಸಂಜೀವ ಮಠಂದೂರು ಅವರು ಪುತ್ತೂರಿನ ಶಾಸಕರಾದ ಮೇಲೆ ಇಲ್ಲಿ ಅಶಕ್ತರಿಗೆ ರಕ್ಷಣೆ ಇಲ್ಲದ ಸ್ಥಿತಿ ನಿರ್ಮಾಣವಾಗಿದೆಯೇ’ ಎಂದು ಅವರು ಪ್ರಶ್ನಿಸಿದರು.
ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಅವರು ಮಾತನಾಡಿ, ‘ಆರೋಪಿಗಳು ಎಬಿವಿಪಿಯವರಲ್ಲ ಎಂದು ಹೇಳಿಕೆ ಕೊಟ್ಟ ಮಾತ್ರಕ್ಕೆ ಜನ ನಂಬಲಾರರು. ಬೇರೆ ಕೋಮಿನವರಿಗೆ ಹಲ್ಲೆ , ಬಸ್ಗೆ ಕಲ್ಲು ಹೊಡೆದವರನ್ನು ನಮ್ಮವರು ಎನ್ನುತ್ತೀರಿ. ಈಗ ಮಾತ್ರ ನಿಮ್ಮವರಲ್ಲವೇ’ ಎಂದು ಛೇಡಿಸಿದರು. ‘ಶೋಭಾ ಕರಂದ್ಲಾಜೆಯವರೇ, ನಿಮ್ಮ ಸರ್ಕಾರ ರಾಜ್ಯದಲ್ಲಿದ್ದಾಗ ಸಚಿವರು, ಶಾಸಕರು ಮಾಡಿದ ಚುಂಬನ, ಆಲಿಂಗನ, ಶಯನ ಮುಂತಾದ ಕರ್ಮಕಾಂಡವೇ ಇಂದು ಯುವಜನರಿಗೆ ಕೆಟ್ಟ ಪ್ರೇರಣೆಯಾಗಿ ನಿಮ್ಮದೇ ಜಿಲ್ಲೆಯಲ್ಲಿ ಪ್ರತಿಧ್ವನಿಸುತ್ತಿದೆ’ ಎಂದು ಸವಾಲೆಸೆದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಸ್ವಾಗತಿಸಿದರು. ಪಕ್ಷದ ಮುಖಂಡ ಎಂ.ಬಿ. ವಿಶ್ವನಾಥ ರೈ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪ್ಪಿನಂಗಡಿ ವಿಟ್ಲ ಬ್ಲಾಕ್ ಅಧ್ಯಕ್ಷ ಮುರಳಿಧರ ರೈ ಮಠಂತಬೆಟ್ಟು, ಜಿಲ್ಲಾ ಕಿಸಾನ್ ಘಟಕದ ಅಧ್ಯಕ್ಷ ಉಮಾನಾಥ ಶೆಟ್ಟಿ, ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಸೂತ್ರಬೆಟ್ಟು ಜಗನ್ನಾಥ ರೈ, ಪುತ್ತೂರು ಯುವ ಕಾಂಗ್ರೆಸ್ ಅಧ್ಯಕ್ಷ ಯು.ಟಿ. ತೌಸಿಫ್, ಜಿಲ್ಲಾ ಎನ್ಎಸ್ಯುಐ ಅಧ್ಯಕ್ಷ ಅಬ್ದುಲ್ಲಾ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ವಿಶಾಲಾಕ್ಷಿ ಬನ್ನೂರು, ಮುಖಂಡರಾದ ಎ.ಕೆ. ಜಯರಾಮ ರೈ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದಶರ್ಿಗಳಾದ ಅಮಳ ರಾಮಚಂದ್ರ, ಕೃಷ್ಣ ಪ್ರಸಾದ್ ಆಳ್ವ ಇದ್ದರು. ಬಳಿಕ ಹರೀಶ್ ಕುಮಾರ್ ನೇತೃತ್ವದಲ್ಲಿ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್