ಉಳ್ಳಾಲ: ಪವಿತ್ರ ಹಜ್ ಕರ್ಮ ನಿರ್ವಹಿಸಲು ಮಕ್ಕಾಕೆ ತೆರಳಲಿರುವ ಹಜ್ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮವು ಪ್ರತೀ ವರ್ಷ ನಡೆಸಿಕೊಂಡು ಬರುವಂತೆ ದಿನಾಂಕ 07.07.2019 ಆದಿತ್ಯವಾರ ಅಸರ್ ನಮಾಝ್ ಬಳಿಕ SYS SSF ಅಜ್ಜಿನಡ್ಕ ಶಾಖಾ ಕಛೇರಿಯಲ್ಲಿ ನಡೆಯಿತು.
ಹಜ್ ಅಮೀರ್ ಬಹು|ಉಸ್ಮಾನ್ ಮದನಿ ದುಆ ನಡೆಸಿ ಹಜ್ ತರಗತಿ ನಡೆಸಿದರು.ಬಹು| ಮುಹಮ್ಮದ್ ಶರೀಫ್ ಸಅದಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಹಜ್ ಯಾತ್ರೆಗೆ ತೆರಳುತ್ತಿರುವ ಬಹು|ಮುಹಮ್ಮದ್ ಶರೀಫ್ ಸಅದಿ, ಕುಞ್ಞಹ್ಮದ್ ಅಜ್ಜಿನಡ್ಕ,ಇಬ್ರಾಹಿಂ ಉಚ್ಚಿಲ, ಉಮರ್ ಮಾಸ್ಟರ್ ಹಿದಾಯತ್ ನಗರ ರವರನ್ನು ಶಾಲು ಹೊದಿಸಿ ಬೀಳ್ಕೊಡಲಾಯಿತು.
SYS ಕೆ ಸಿ ರೋಡ್ ಸೆಂಟರ್ ಅಧ್ಯಕ್ಷ ಜನಾಬ್|ಉಮರ್ ಮಾಸ್ಟರ್ ,ಬದ್ರಿಯಾ ಜುಮಾ ಮಸೀದಿ ಅಜ್ಜಿನಡ್ಕ ಪ್ರಧಾನ ಕಾರ್ಯದರ್ಶಿ ಅಹ್ಮದ್ ಅಜ್ಜಿನಡ್ಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

SYS ಅಜ್ಜಿನಡ್ಕ ಬ್ರಾಂಚ್ ಅಧ್ಯಕ್ಷ ಅಬ್ದುಲ್ಲಾ MM, ಪ್ರಧಾನ ಕಾರ್ಯದರ್ಶಿ ಹಂಝ KM, SSF ಕೋಟೆಕಾರ್ ಸೆಕ್ಟರ್ ಅಧ್ಯಕ್ಷ ಸಿದ್ದೀಖ್ ಕೊಮರಂಗಳ, SSF ಅಜ್ಜಿನಡ್ಕ ಶಾಖಾಧ್ಯಕ್ಷ ಮುಸ್ತಫ ಕೆ.ಪಿ ಹಾಗೂ SYS ನಾಯಕರು, SSF ಕಾರ್ಯಕರ್ತರು ಉಪಸ್ಥಿತರಿದ್ದರು.
ಅಜ್ಜಿನಡ್ಕ ಶಾಖಾ ಉಪಾಧ್ಯಕ್ಷ ಫೈಝಲ್ ಮುಸ್ಲಿಯಾರ್ ಸ್ವಾಗತಿಸಿ, ಅಜ್ಜಿನಡ್ಕ ಶಾಖಾ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಫೀಫ್ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ