ಉಳ್ಳಾಲ: ಪವಿತ್ರ ಹಜ್ ಕರ್ಮ ನಿರ್ವಹಿಸಲು ಮಕ್ಕಾಕೆ ತೆರಳಲಿರುವ ಹಜ್ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮವು ಪ್ರತೀ ವರ್ಷ ನಡೆಸಿಕೊಂಡು ಬರುವಂತೆ ದಿನಾಂಕ 07.07.2019 ಆದಿತ್ಯವಾರ ಅಸರ್ ನಮಾಝ್ ಬಳಿಕ SYS SSF ಅಜ್ಜಿನಡ್ಕ ಶಾಖಾ ಕಛೇರಿಯಲ್ಲಿ ನಡೆಯಿತು.
ಹಜ್ ಅಮೀರ್ ಬಹು|ಉಸ್ಮಾನ್ ಮದನಿ ದುಆ ನಡೆಸಿ ಹಜ್ ತರಗತಿ ನಡೆಸಿದರು.ಬಹು| ಮುಹಮ್ಮದ್ ಶರೀಫ್ ಸಅದಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಹಜ್ ಯಾತ್ರೆಗೆ ತೆರಳುತ್ತಿರುವ ಬಹು|ಮುಹಮ್ಮದ್ ಶರೀಫ್ ಸಅದಿ, ಕುಞ್ಞಹ್ಮದ್ ಅಜ್ಜಿನಡ್ಕ,ಇಬ್ರಾಹಿಂ ಉಚ್ಚಿಲ, ಉಮರ್ ಮಾಸ್ಟರ್ ಹಿದಾಯತ್ ನಗರ ರವರನ್ನು ಶಾಲು ಹೊದಿಸಿ ಬೀಳ್ಕೊಡಲಾಯಿತು.
SYS ಕೆ ಸಿ ರೋಡ್ ಸೆಂಟರ್ ಅಧ್ಯಕ್ಷ ಜನಾಬ್|ಉಮರ್ ಮಾಸ್ಟರ್ ,ಬದ್ರಿಯಾ ಜುಮಾ ಮಸೀದಿ ಅಜ್ಜಿನಡ್ಕ ಪ್ರಧಾನ ಕಾರ್ಯದರ್ಶಿ ಅಹ್ಮದ್ ಅಜ್ಜಿನಡ್ಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

SYS ಅಜ್ಜಿನಡ್ಕ ಬ್ರಾಂಚ್ ಅಧ್ಯಕ್ಷ ಅಬ್ದುಲ್ಲಾ MM, ಪ್ರಧಾನ ಕಾರ್ಯದರ್ಶಿ ಹಂಝ KM, SSF ಕೋಟೆಕಾರ್ ಸೆಕ್ಟರ್ ಅಧ್ಯಕ್ಷ ಸಿದ್ದೀಖ್ ಕೊಮರಂಗಳ, SSF ಅಜ್ಜಿನಡ್ಕ ಶಾಖಾಧ್ಯಕ್ಷ ಮುಸ್ತಫ ಕೆ.ಪಿ ಹಾಗೂ SYS ನಾಯಕರು, SSF ಕಾರ್ಯಕರ್ತರು ಉಪಸ್ಥಿತರಿದ್ದರು.
ಅಜ್ಜಿನಡ್ಕ ಶಾಖಾ ಉಪಾಧ್ಯಕ್ಷ ಫೈಝಲ್ ಮುಸ್ಲಿಯಾರ್ ಸ್ವಾಗತಿಸಿ, ಅಜ್ಜಿನಡ್ಕ ಶಾಖಾ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಫೀಫ್ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ