ಕುವೈತ್ ಸಿಟಿ: ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಸಲುವಾಗಿ ಅಲ್ಲಿನ ಗೃಹ ಸಚಿವಾಲಯ ಕ್ರಮಗಳನ್ನು ಆರಂಭಿಸಿದೆ. ಪರವಾನಗಿ ರಹಿತವಾಗಿ ವಾಹನ ಚಲಾಯಿಸಿದ ವಿದೇಶೀಯರನ್ನು ಶಿಕ್ಷೆಯ ಬಳಿಕ ಗಡಿಪಾರು ಮಾಡಲಾಗುವುದು. ಈ ಕಾರ್ಯದಲ್ಲಿ ಯಾವುದೇ ವಿನಾಯಿತಿ ನೀಡಲಾಗುವುದಿಲ್ಲ ಎಂದು ಸಚಿವಾಲಯದ ಸಾರ್ವಜನಿಕ ವಿಭಾಗದ ಅಧಿಕಾರಿ ಪತ್ರಿಕಾ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಸಂಚಾರ ಸುರಕ್ಷತಾ ಕ್ರಮಗಳನ್ನು ಇನ್ನಷ್ಟು ಬಿಗಿ ಗೊಳಿಸಲಾಗುವುದು. ದೇಶದಲ್ಲಿ ಸಂಚಾರಿ ಅಪಘಾತ ಮೂಲಕ ಉಂಟಾಗುವ ಮರಣಗಳನ್ನು ತಪ್ಪಿಸುವ ಸಲುವಾಗಿ ಈ ನಡೆ ಎನ್ನಲಾಗಿದೆ. ಅದೇ ವೇಳೆ ಕಾನೂನು ಪಾಲನೆಯಲ್ಲಿ ಚ್ಯುತಿ ಉಂಟುಮಾಡುವ ಅಧಿಕಾರಿಗಳ ವಿರುದ್ದವೂ ಕ್ರಮ ಕೈಗೊಳ್ಳಲಾಗುತ್ತದೆ. ವಾಹನ ಚಲಾಯಿಸುವ ವಿದೇಶೀಯರು ಕಾನೂನು ಪಾಲಿಸಬೇಕು. ಪಾಲಿಸದಿದ್ದಲ್ಲಿ ಗಡಿಪಾರು ಮಾಡಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಕಾನೂನು ಸಚಿವಾಲಯದ ಪ್ರಸಕ್ತ ಸಾಲಿನ ವರದಿಯ ಅನುಸಾರ ಕಳೆದ ವರ್ಷ 263 ಮಂದಿ ವಾಹನ ಅಪಘಾತ ಮೂಲಕ ಮೃತಪ್ಪಟ್ಟಿದ್ದಾರೆ. ಅಪಘಾತ ಪ್ರಮಾಣವು ಹಿಂದಿನ ವರ್ಷಕ್ಕಿಂತ 2018ರಲ್ಲಿ ಹೆಚ್ಚಾಗಿರುವುದಾಗಿ ವರದಿ ತಿಳಿಸಿದೆ. ಈ ವರದಿಯ ಹಿನ್ನೆಲೆಯಲ್ಲಿ ಯಾತ್ರಿಕರ ಸುರಕ್ಷತೆಗಾಗಿ ರಹದಾರಿ ಕಾನೂನಿನ ಪಾಲನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶ ನಿಡಲಾಗಿದೆ.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ