ಕುವೈತ್ ಸಿಟಿ: ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಸಲುವಾಗಿ ಅಲ್ಲಿನ ಗೃಹ ಸಚಿವಾಲಯ ಕ್ರಮಗಳನ್ನು ಆರಂಭಿಸಿದೆ. ಪರವಾನಗಿ ರಹಿತವಾಗಿ ವಾಹನ ಚಲಾಯಿಸಿದ ವಿದೇಶೀಯರನ್ನು ಶಿಕ್ಷೆಯ ಬಳಿಕ ಗಡಿಪಾರು ಮಾಡಲಾಗುವುದು. ಈ ಕಾರ್ಯದಲ್ಲಿ ಯಾವುದೇ ವಿನಾಯಿತಿ ನೀಡಲಾಗುವುದಿಲ್ಲ ಎಂದು ಸಚಿವಾಲಯದ ಸಾರ್ವಜನಿಕ ವಿಭಾಗದ ಅಧಿಕಾರಿ ಪತ್ರಿಕಾ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಸಂಚಾರ ಸುರಕ್ಷತಾ ಕ್ರಮಗಳನ್ನು ಇನ್ನಷ್ಟು ಬಿಗಿ ಗೊಳಿಸಲಾಗುವುದು. ದೇಶದಲ್ಲಿ ಸಂಚಾರಿ ಅಪಘಾತ ಮೂಲಕ ಉಂಟಾಗುವ ಮರಣಗಳನ್ನು ತಪ್ಪಿಸುವ ಸಲುವಾಗಿ ಈ ನಡೆ ಎನ್ನಲಾಗಿದೆ. ಅದೇ ವೇಳೆ ಕಾನೂನು ಪಾಲನೆಯಲ್ಲಿ ಚ್ಯುತಿ ಉಂಟುಮಾಡುವ ಅಧಿಕಾರಿಗಳ ವಿರುದ್ದವೂ ಕ್ರಮ ಕೈಗೊಳ್ಳಲಾಗುತ್ತದೆ. ವಾಹನ ಚಲಾಯಿಸುವ ವಿದೇಶೀಯರು ಕಾನೂನು ಪಾಲಿಸಬೇಕು. ಪಾಲಿಸದಿದ್ದಲ್ಲಿ ಗಡಿಪಾರು ಮಾಡಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಕಾನೂನು ಸಚಿವಾಲಯದ ಪ್ರಸಕ್ತ ಸಾಲಿನ ವರದಿಯ ಅನುಸಾರ ಕಳೆದ ವರ್ಷ 263 ಮಂದಿ ವಾಹನ ಅಪಘಾತ ಮೂಲಕ ಮೃತಪ್ಪಟ್ಟಿದ್ದಾರೆ. ಅಪಘಾತ ಪ್ರಮಾಣವು ಹಿಂದಿನ ವರ್ಷಕ್ಕಿಂತ 2018ರಲ್ಲಿ ಹೆಚ್ಚಾಗಿರುವುದಾಗಿ ವರದಿ ತಿಳಿಸಿದೆ. ಈ ವರದಿಯ ಹಿನ್ನೆಲೆಯಲ್ಲಿ ಯಾತ್ರಿಕರ ಸುರಕ್ಷತೆಗಾಗಿ ರಹದಾರಿ ಕಾನೂನಿನ ಪಾಲನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶ ನಿಡಲಾಗಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ