ಮದೀನಾ ಮುನವ್ವರ,ಜುಲೈ.10: ಬೆಂಗಳೂರಿನ ಬೈತುಲ್ ಹರಮ್ ಇಂಟರ್ನ್ಯಾಷನಲ್ ಉಮ್ರಾ ಗ್ರೂಪ್ ಮೂಲಕ ಉಮ್ರಾ ಯಾತ್ರಾರ್ಥಿಗಳಾಗಿ ಬಂದು ಊರಿಗೆ ಹಿಂದಿರುಗುವ ವ್ಯವಸ್ಥೆ ಕಲ್ಪಿಸದೆ ಟ್ರಾವೆಲ್ಸ್’ನಿಂದ ವಂಚನೆಗೊಳಪಟ್ಟು ರೂಮ್ ಹಾಗೂ ಊಟದ ವ್ಯವಸ್ಥೆ ಇಲ್ಲದೆ ಮಹಿಳೆಯರು, ವಯಸ್ಕರು ಮಕ್ಕಳನ್ನೊಳಗೊಂಡ 81 ಮಂದಿ ಉಮ್ರಾ ತಂಡ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

ವೈರಲ್ ವಿಡಿಯೋ ಮೂಲಕ KCF ಮದೀನಾ ಮುನವ್ವರ ಸೆಕ್ಟರ್ ಸಾಂತ್ವನ ಇಲಾಖೆಯ ಗಮನಕ್ಕೆ ಬಂದಾಗ ಯಾತ್ರಾರ್ಥಿಗಳನ್ನು ಭೇಟಿಯಾಗಿ ಸಾಂತ್ವನ ಪಡಿಸಿ ಬೇಕಾಗುವ ವ್ಯವಸ್ಥೆಮಾಡಿಕೊಡಲಾಗಿದೆ.

ಭಾರತೀಯ ದೂತಾವಾಸ ಕಛೇರಿಯ ಸಹಕಾರದಿಂದ ಮೂರು ಹಂತವಾಗಿ 81 ಮಂದಿಯನ್ನು ಜಿದ್ದಾ ವಿಮಾನ ನಿಲ್ದಾಣ ಮೂಲಕ ಸ್ವದೇಶ ತಲುಪಿಸುವ ವ್ಯವಸ್ಥೆ ಕಲ್ಪಿಸಲಾಗಿದ್ದು.ಜುಲೈ 9ರಂದು ಹೊರಟ 25 ಮಂದಿಯ ಮೊದಲ ತಂಡ ಸ್ವದೇಶ ತಲುಪಿದ್ದು,ಇಂದು ಹೊರಟ 25ಮಂದಿ ಸ್ವದೇಶ ಪ್ರಯಾಣದಲ್ಲಿದೆ. ಉಳಿದ ಎಲ್ಲಾ ಯಾತ್ರಾರ್ಥಿಗಳಿಗೆ ನಾಳೆ ಗುರುವಾರ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ.

ಕೆ.ಸಿ.ಎಫ್ ಸಾಂತ್ವನ ಇಲಾಖೆಯ ಸದಸ್ಯರು ಸಂಕಷ್ಟದಲ್ಲಿರುವ ಯಾತ್ರಾರ್ಥಿಗಳ ವಸತಿ ಕೇಂದ್ರಕ್ಕೆ ಎಲ್ಲಾ ದಿವಸ ಭೇಟಿನೀಡಿ ಬೇಕಾದ ಸಹಾಯ ಹಾಗೂ ಸ್ವದೇಶಕ್ಕೆ ಮರಳುವವರೆಗೆ 3ದಿವಸಗಳ ಊಟದ ವ್ಯವಸ್ಥೆ ಕಲ್ಪಿಸಿ ಸಂಕಷ್ಟದಲ್ಲಿರುವ ಉಮ್ರಾ ತಂಡಕ್ಕೆ ಆಸರೆಯಾಗಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ