ಬೆಂಗಳೂರು: ಸಿಎಂ ಎಚ್.ಡಿ. ಕುಮಾರಸ್ವಾಮಿ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಮುಂಬೈನಲ್ಲಿರುವ 10, ಬೆಂಗಳೂರಿನಲ್ಲೇ ಇರುವ ಐವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಇಬ್ಬರು ಪಕ್ಷೇತರ ಶಾಸಕರು ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸು ಪಡೆದು, ಪ್ರತಿಪಕ್ಷಗಳ ಸಾಲಿನಲ್ಲಿ ಕೂರುವುದಾಗಿ ಹೇಳುತ್ತಿದ್ದಾರೆ. ಹೀಗಿದ್ದೂ ಸಿಎಂ ಎಚ್.ಡಿ. ಕುಮಾರಸ್ವಾಮಿ ವಿಶ್ವಾಸಮತ ಸಾಬೀತಪಡಿಸುವುದಾಗಿ ಹೇಳುತ್ತಿದ್ದಾರೆ. ಅದು ಏನಾಗುತ್ತದೋ ನೋಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಬಿಜೆಪಿ ಶಾಸಕರು ಇರುವ ರಮಡಾ ಹೋಟೆಲ್ಗೆ ತೆರಳಿ ಅವರೊಂದಿಗೆ ಚರ್ಚಿಸಿದ ಬಳಿಕ ಶನಿವಾರ ಸುದ್ದಿಗಾರರ ಜತೆ ಮಾತನಾಡಿದರು. ಸೋಮವಾರದ ಕಲಾಪದಲ್ಲಿ ಏನೆಲ್ಲ ಬೆಳವಣಿಗೆಯಾಗುತ್ತದೆ ಎಂಬುದನ್ನು ಕಾದು ನೋಡಲಿದ್ದೇವೆ. ಜತೆಗೆ ಸುಪ್ರೀಂಕೋರ್ಟ್ ಮಂಗಳವಾರ ನೀಡಲಿರುವ ತೀರ್ಪನ್ನು ಗಮನಿಸಲಿದ್ದೇವೆ. ಆನಂತರದಲ್ಲಿ ಮುಂದಿನ ಹೋರಾಟದ ರೂಪುರೇಷೆ ನಿರ್ಧರಿಸುವುದಾಗಿ ತಿಳಿಸಿದರು.
ಎಂಟಿಬಿ ನಾಗರಾಜ್ ಯು ಟರ್ನ್ ಹೊಡೆದು ರಾಜೀನಾಮೆ ಹಿಂಪಡೆಯುವುದಾಗಿ ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸ್ವತಃ ಎಂಟಿಬಿ ನಾಗರಾಜ್ ಶನಿವಾರ ಬೆಳಗ್ಗೆ ತಮ್ಮ ರಾಜೀನಾಮೆ ಅಂಗೀಕರಿಸುವಲ್ಲಿ ವಿಧಾಸಭಾಧ್ಯಕ್ಷರು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಸಚಿವ ಡಿ.ಕೆ. ಶಿವಕುಮಾರ್ ಅವರು ತಮ್ಮ ಮನವೊಲಿಸಿದ್ದು, ತಾವು ಕಾಂಗ್ರೆಸ್ನಲ್ಲೇ ಉಳಿಯಲು ನಿರ್ಧರಿಸಿರುವುದಾಗಿ ಹೇಳುತ್ತಿದ್ದಾರೆ. ಈ ರೀತಿಯ ದ್ವಂದ್ವದ ಹೇಳಿಕೆ ನೀಡಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಅದೇನೇ ಆದರೂ ಈ ಸರ್ಕಾರ ಪತನಗೊಳ್ಳುವುದು ಖಚಿತ ಎಂದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ