ದೋಹಾ: ವಿಮಾನ ಯಾತ್ರೆ ನಡೆಸುವಾಗ ಇತರರ ಲಗೇಜುಗಳನ್ನು ಸಾಗಿಸುವುದರ ವಿರುದ್ಧ ಕತಾರ್ನ ಗೃಹ ಇಲಾಖೆಯು ಎಚ್ಚರಿಕೆ ನೀಡಿದೆ. ಪ್ರಯಾಣಿಕರು ಜಾಗರೂಕರಾಗಿರಬೇಕು ಮತ್ತು ತಪಾಸಣೆಗೆ ಸಿಲುಕಿದರೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ರಜಾದಿನಗಳನ್ನು ಆಚರಿಸಲು ವಲಸಿಗರು ಊರಿಗೆ ಮರಳುವ ಈ ಸಂದರ್ಭದಲ್ಲಿ ಕತಾರ್ ಗೃಹ ಇಲಾಖೆ ಈ ಎಚ್ಚರಿಕೆಯನ್ನು ನೀಡಿದೆ.
ಪ್ರಯಾಣಿಕರು ತಮ್ಮ ಲಗೇಜುಗಳೊಂದಿಗೆ ಇತರರ ಸಾಮಾನುಗಳನ್ನು ತಮ್ಮೊಂದಿಗೆ ಕೊಂಡೊಯ್ಯುವುದು ಸಾಮಾನ್ಯವಾಗಿದೆ. ಆದರೆ ಈ ಸಾಮಾನುಗಳಲ್ಲಿ ಏನಿದೆ ಎಂದು ನಿಖರವಾಗಿ ತಿಳಿಯದಿರುವುದು ತಮ್ಮ ಪ್ರಯಾಣಕ್ಕೆ ಅಡ್ಡಿಯಾಗಬಹುದು.
ಇದಲ್ಲದೆ, ವಿಮಾನ ನಿಲ್ದಾಣಗಳಲ್ಲಿ ಪರಿಚಯವಿಲ್ಲದ ಜನರು ಸಾಮಾನುಗಳನ್ನು ನೀಡುವ ಘಟನೆಗಳೂ ಸಾಮಾನ್ಯವಾಗಿದೆ. ಇಂತಹ ಸಾಮಾನುಗಳನ್ನು ನಿಷೇಧಿತ ವಸ್ತುಗಳಾಗಿರಲೂ ಬಹುದು, ಇದು ಅನೇಕ ಮುಗ್ಧ ಜನರ ಬಂಧನಕ್ಕೂ ಕಾರಣವಾಗಿದೆ.
ವಿಮಾನ ನಿಲ್ದಾಣದಲ್ಲಿ ವಿಪರೀತ ಜನ ಜಂಗುಲಿ ಇರುವ ಸಮಯದಲ್ಲಿ ಈ ಅಕ್ರಮ ಚಟುವಟಿಕೆಗಳು ಹೆಚ್ಚಾಗಿ ಸಂಭವಿಸುತ್ತವೆ. ಆ ಕಾರಣಕ್ಕಾಗಿ ರಜೆಯಲ್ಲಿ ಊರಿಗೆ ತೆರಳುವ ವಲಸಿಗರು ಮತ್ತು ಇತರರಿಗೆ ಜಾಗರೂಕರಾಗಿರಲು ಗೃಹ ಸಚಿವಾಲಯ ಸೂಚನೆ ನೀಡಿದೆ. ಕಸ್ಟಮ್ಸ್ ಸೇರಿದಂತೆ ತಪಾಸಣೆ ಇಲಾಖೆ ಈ ನಿಟ್ಟಿನಲ್ಲಿ ಕಠಿಣ ತಪಾಸಣೆ ನಡೆಸುತ್ತಿದೆ.
ಅಕ್ರಮ ವಸ್ತುಗಳು ಮತ್ತು ಸಾಮಾನುಗಳು ಪತ್ತೆಯಾದರೆ ಅವರಿಗೆ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ. ಒಬ್ಬ ವ್ಯಕ್ತಿಯ ಕಾನೂನುಬಾಹಿರ ಚಟುವಟಿಕೆಯು ಇಡೀ ಪ್ರಯಾಣಿಕರ ಮೇಲೂ ಪರಿಣಾಮ ಬೀರಬಹುದು. ಆದೂದರಿಂದ ಪ್ರಯಾಣಿಕರು ತಮ್ಮ ಸಾಮಾನುಗಳನ್ನು ಮಾತ್ರ ಸಾಗಿಸುತ್ತಿದ್ದೇನೆ ಎಂದು ಖಚಿತಪಡಿಸಿಕೊಳ್ಳಿ ಎಂದು ಗೃಹ ಇಲಾಖೆ ಟ್ವಿಟರ್ ಮೂಲಕ ಒತ್ತಾಯಿಸಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು