ಬೆಳ್ತಂಗಡಿ : ಕರ್ನಾಟಕ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ (SSF) ಬೆಳ್ತಂಗಡಿ ಇದರ 2019-20 ನೇ ಸಾಲಿನ ಅರ್ಧ ವಾರ್ಷಿಕ ಮಹಾಸಭೆಯು 25 ಜುಲೈ 2019 ರಂದು ಮಗ್ರಿಬ್ ನಮಾಝಿನ ಬಳಿಕ ಡಿವಿಷನ್ ಅಧ್ಯಕ್ಷರಾದ ಬಹು|ಅಯ್ಯೂಬ್ ಮಹ್ಲರಿ ಕಾವಳಕಟ್ಟೆ ಇವರ ಘನ ಅಧ್ಯಕ್ಷತೆಯಲ್ಲಿ ಸುವರ್ಣ ಆರ್ಕೇಡ್ ಬೆಳ್ತಂಗಡಿಯಲ್ಲಿ ನಡೆಯಿತು.
ಅಯ್ಯೂಬ್ ಮಹ್ ಲರಿ ಉಸ್ತಾದ್ ರವರ ದುಆದೊಂದಿಗೆ ಡಿವಿಷನ್ ಉಪಾಧ್ಯಕ್ಷರಾದ ಕರೀಂ ಸಖಾಫಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಡಿವಿಷನ್ ಉಸ್ತುವಾರಿ, ಜಿಲ್ಲಾ ಕಾರ್ಯದರ್ಶಿ ರಶೀದ್ ಹಾಜಿ ವಗ್ಗ ,ಜಿಲ್ಲಾ ನಾಯಕರಾದ ಹಕೀಂ ಕಲೈಂಜಿಬೈಲು ಹಾಗೂ ಮುಸ್ತಫ ಉರುವಾಲುಪದವು ವೀಕ್ಷಕರಾಗಿ ಆಗಮಿಸಿದ್ದರು.

ಮುಸ್ತಫ ಉರುವಾಲುಪದವು ಇವರು ಸಭೆಗೆ ಶುಭಾಶಯ ಕೋರಿ ಮಾತನಾಡಿದರು.ಬಳಿಕ ರಶೀದ್ ಹಾಜಿ ವಗ್ಗ ಇವರು ಸಂಘಟನಾ ತರಗತಿ ನಡೆಸಿಕೊಟ್ಟರು.
ಡಿವಿಷನ್ ಪ್ರ.ಕಾರ್ಯದರ್ಶಿ ಶರೀಫ್ ನಾವೂರು ರವರು ವರದಿ ಹಾಗೂ ಕೋಶಾಧಿಕಾರಿ ಬಹು|ನಝೀರ್ ಮದನಿ ಉಸ್ತಾದ್ ರವರು ಲೆಕ್ಕಪತ್ರ ಮಂಡಿಸಿದರು.ತದನಂತರ ವೀಕ್ಷಕರ ನೇತೃತ್ವದಲ್ಲಿ ಸಮಿತಿಯ ಕಾರ್ಯಾಚರಣೆಯ ಅವಲೋಕನ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ನಾಯಕರಾದ ಇಕ್ಬಾಲ್ ಮಾಚಾರು, ಶರೀಫ್ ಬೇರ್ಕಳ ಹಾಗೂ ಡಿವಿಷನ್ ನಾಯಕರು ಉಪಸ್ಥಿತರಿದ್ದರು.
ಕಾರ್ಯದರ್ಶಿ ನವಾಝ್ ಮಾವಿನಕಟ್ಟೆ ಸ್ವಾಗತಿಸಿ, ಕಾರ್ಯದರ್ಶಿ ತೌಫೀಕ್ ವೇಣೂರು ವಂದಿಸಿದರು.
ವರದಿ:ಎಂ.ಎಂ.ಉಜಿರೆ















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ