ಮಂಗಳೂರು: ಹಿರಿಯ ವಿದ್ವಾಂಸ ಅಲ್ ಮದೀನ ಸಂಸ್ಥೆಯ ಶಿಲ್ಪಿ ಶೈಖುನಾ ಶರಫುಲ್ ಉಲಮಾ ಅಬ್ಬಾಸ್ ಉಸ್ತಾದರ ಮರಣ ವಾರ್ತೆ ಕೇಳಿ ತೀವ್ರ ಧು:ಖಿತನಾದೆ, ಅವರ ವಿಯೋಗ ಸಮಾಜಕ್ಕೆ ತುಂಬಲಾರದ ನಷ್ಟ. ಹುಟ್ಟೂರು ಕೊಡಗು ಆದರೂ ತನ್ನ ಸೇವೆಗೆ ಕರಾವಳಿ ಭಾಗವನ್ನು ಆಯ್ಕೆ ಮಾಡಿದ ಶೈಖುನಾರವರು ಮುಸ್ಲಿಂ ಸಮಾಜಕ್ಕೆ ನೀಡಿದ ಕೊಡುಗೆ ಅಪಾರ.
ಸುಮಾರು 25 ವರ್ಷಗಳ ಹಿಂದೆ ಈ ಸಮಾಜದಲ್ಲಿ ಶೈಕ್ಷಣಿಕ ಮತ್ತು ಆರ್ಥಿಕವಾಗಿ ಹಿಂದುಳಿದ ಯತೀಂ ಮಕ್ಕಳಿಗೆ ವಸತಿ ಸೌಕರ್ಯದೊಂದಿಗೆ ಗುಣಮಟ್ಟದ ಉಭಯ ಶಿಕ್ಷಣ ನೀಡಿ ಬೆಳೆಸಬೇಕೆಂಬ ಉದ್ದೇಶದೊಂದಿಗೆ ಆರಂಭಿಸಿದ ಅಲ್ ಮದೀನಾ ಎಂಬ ಸಂಸ್ಥೆ, ಶೈಖುನಾರವರು ಈ ಉಮ್ಮತ್ ಗೆ ನೀಡಿದ ಮಹಾ ಕೊಡುಗೆಯಾಗಿದೆ, ಇಂದು ಆ ಸಂಸ್ಥೆ ಬೆಳೆದು ಹೆಮ್ಮರವಾಗಿದೆ,ದೇಶ ವಿದೇಶಗಳಲ್ಲಿ ಅದರ ಕೀರ್ತಿ ಹಬ್ಬಿದೆ.
ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ನ ಎಲ್ಲಾ ಕಾರ್ಯಕ್ರಮಗಳಿಗೂ ಉಸ್ತಾದರು ನೀಡಿದ ಸಹಾಯ ಸಹಕಾರ ಮತ್ತು ಪ್ರೋತ್ಸಾಹ ಎಂದೂ ಮರೆಯಲು ಸಾಧ್ಯವಿಲ್ಲ.ಅಲ್ಲಾಹು ಅವರ ಪದವಿಯನ್ನು ಉನ್ನತಿಗೇರಿಸಲಿ….ಎಂದು ಪ್ರಾರ್ಥಿಸುತ್ತಾ ಅವರ ವಿಯೋಗಕ್ಕೆ ಸಂತಾಪ ಸೂಚಿಸುವೆನು ಮೃತರ ಹೆಸರಿನಲ್ಲಿ ಮಯ್ಯಿತ್ ನಮಾಜು ನಿರ್ವಹಿಸಿ, ಖುರ್ ಆನ್ ಪಾರಾಯಣದೊಂದಿಗೆ ಪ್ರತ್ಯೇಕ ಪ್ರಾರ್ಥನೆ ನಡೆಸಲು ಈ ಮೂಲಕ ವಿನಂತಿಸುತ್ತೇನೆ.
ಆತೂರು ಸಅದ್ ಮುಸ್ಲಿಯಾರ್
(ಅಧ್ಯಕ್ಷರು ಎಸ್ ಜೆ ಎಂ ಕರ್ನಾಟಕ)















ಇನ್ನಷ್ಟು ಸುದ್ದಿಗಳು
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ