ಬೆಂಗಳೂರು (ಜು.30): ದ್ವೇಷ ರಾಜಕಾರಣ ಮಾಡುವುದಿಲ್ಲವೆಂದು ಹೇಳಿದ 24 ಗಂಟೆಯೊಳಗೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಟಿಪ್ಪು ಜಯಂತಿಯನ್ನು ರದ್ದು ಮಾಡುವ ಮೂಲಕ ಸಿಎಂ ಬಿಎಸ್ ಯಡಿಯೂರಪ್ಪ ವಚನ ಭ್ರಷ್ಟರಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಕಿಡಿಕಾರಿದೆ.
ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ಟಿಪ್ಪು ಜಯಂತಿಯನ್ನು ರದ್ದು ಮಾಡಿ ನೂತನ ಬಿಜೆಪಿ ಸರ್ಕಾರ ಆದೇಶಿದೆ. ಈ ಕುರಿತು ಮಾತನಾಡಿರುವ ಸಿಎಂ ಯಡಿಯೂರಪ್ಪ, ಹಿಂದೆಲ್ಲಾ ಟಿಪ್ಪು ಜಯಂತಿ ಸಂದರ್ಭದಲ್ಲಿ ಅಲ್ಲಲ್ಲಿ ಗಲಾಟೆ, ಘರ್ಷಣೆಗಳಾಗಿತ್ತು. ಅದು ಪುನರಾವರ್ತನೆಯಾಗಬಾರದೆಂದು ಶಾಸಕರ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಯಂತಿ ಆಚರಣೆ ರದ್ದು ಮಾಡಲು ಮುಂದಾಗಿವೆ ಎಂದಿದ್ದಾರೆ.
ಬಿ.ಎಸ್.ಯಡಿಯೂರಪ್ಪನವರು ಕೈಯಲ್ಲಿ ಕತ್ತಿ ಹಿಡಿದು ಟಿಪ್ಪು ವೇಷ ಹಾಕಿ ಕುಣಿದಾಡುತ್ತಾ ಟಿಪ್ಪು ಜಯಂತಿಯಲ್ಲಿ ಭಾಗವಹಿಸಿದ್ದರು. ಈಗ ಸಂಘ ಪರಿವಾರವನ್ನು ಖುಷಿಪಡಿಸಲು ಟಿಪ್ಪು ಜಯಂತಿಯನ್ನು ರದ್ದು ಮಾಡಿದ್ದಾರೆ. pic.twitter.com/gePSjztY6s
— Siddaramaiah (@siddaramaiah) July 30, 2019
ಸಿಎಂ ಯಡಿಯೂರಪ್ಪರ ಈ ನಡೆಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಟಿಪ್ಪು ಜಯಂತಿ ರದ್ದು ಮಾಡಿದ್ದು ಅಪರಾಧ. ಟಿಪ್ಪು ಸುಲ್ತಾನ್ ಒಬ್ಬ ಅಲ್ಪಸಂಖ್ಯಾತ. ಮೈಸೂರು ರಾಜ್ಯದಲ್ಲಿ ರಾಜನಾಗಿ ಬ್ರಿಟಿಷರ ವಿರುದ್ಧ ಹೋರಾಡಿದವನು ಟಿಪ್ಪು. ಈ ಹಿನ್ನೆಲೆಯಲ್ಲಿ ಅವರಿಗೆ ಗೌರವ ಸಲ್ಲಿಸಲು ಅವರ ಜಯಂತಿಯನ್ನು ಆಚರಣೆ ಮಾಡಲು ತೀರ್ಮಾನ ಮಾಡಿದ್ದೆವು. ಇತಿಹಾಸದ ಅರಿವಿಲ್ಲದ ಬಿಜೆಪಿಯವರು ದುರುದ್ದೇಶದಿಂದ ಅಲ್ಪಸಂಖ್ಯಾತರ ದ್ವೇಷದಿಂದ ಈ ರೀತಿ ಮಾಡಿದ್ದಾರೆ ಎಂದು ಹರಿಹಾಯ್ದರು.
ಟಿಪ್ಪು ಜಯಂತಿ ಆಚರಣೆ ರದ್ದು ಮಾಡಿರುವ ಬಗ್ಗೆ ರೋಷನ್ ಬೇಗ್ ಉತ್ತರಿಸಬೇಕು. ಕಾಂಗ್ರೆಸ್ ಬಿಟ್ಟು ಬಿಜೆಪಿ ಬಾಗಿಲಲ್ಲಿ ನಿಂತಿರುವ ಬೇಗ್, ಈ ಬಗ್ಗೆ ಮಾತನಾಡಬೇಕು. ಬಿಜೆಪಿ ಸರ್ಕಾರ ಬಂದರೆ ಜಯಂತಿ ಆಚರಣೆ ನಿಷೇಧಿಸುತ್ತಾರೆ ಎಂದು ಗೊತ್ತಿತ್ತು. ಆದರೆ, ಇಷ್ಟು ಬೇಗ ಮಾಡುತ್ತಾರೆ ಎಂದು ಗೊತ್ತಿರಲಿಲ್ಲ ಎಂದು ಜಮೀರ್ ಅಹ್ಮದ್ ತಿಳಿಸಿದ್ದಾರೆ.
ಬಿಜೆಪಿ ಕೋಮುವಾದ ಪಕ್ಷ, ರಾಜಕೀಯ ಲಾಭಕ್ಕಾಗಿ ಜಯಂತಿ ಆಚರಣೆಗೆ ನಿಷೇಧ ಮಾಡಿದ್ದಾರೆ. ಧರ್ಮ ಸ್ವಾರ್ಥಕ್ಕೆ ಉಪಯೋಗ ಮಾಡುತ್ತಾ ಇದ್ದಾರೆ. ಇದರಲ್ಲಿ ಆಶ್ಚರ್ಯ ಏನಿಲ್ಲ ಇದು ಮೊದಲಿನಿಂದಲೇ ಗೊತ್ತಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ