ಬೆಂಗಳೂರು: ಮುಂಗಡ ಟಿಕೆಟ್ ಕಾಯ್ದಿರಿಸುವಿಕೆಯಿಲ್ಲದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) ಬಸ್ಗಳ ಚಾಲಕ–ನಿರ್ವಾಹಕರು ಇನ್ನುಮುಂದೆ ಕರ್ತವ್ಯದ ಅವಧಿಯಲ್ಲಿ ಮೊಬೈಲ್ ದೂರವಾಣಿ ಬಳಸಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದರೆ ಅಮಾನತುಗೊಳ್ಳಲಿದ್ದಾರೆ.
ಚಾಲಕ–ನಿರ್ವಾಹಕರು ಮೊಬೈಲ್ ದೂರವಾಣಿ ಬಳಸುವುದನ್ನು ನಿಷೇಧಿಸಿ ನಿಗಮ ಆದೇಶ ಹೊರಡಿಸಿದ್ದು, ಸೆಪ್ಟೆಂಬರ್ 1ರಿಂದ ಈ ಹೊಸ ಆದೇಶ ಜಾರಿಗೆ ಬರಲಿದೆ.
ಮೊಬೈಲ್ ದೂರವಾಣಿ ಬಳಸಲು ಇದ್ದ ಅವಕಾಶವನ್ನು ಚಾಲಕರು ಮತ್ತು ನಿರ್ವಾಹಕರು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ತನಿಖಾ ಸಿಬ್ಬಂದಿಗಳು ಯಾವ ಮಾರ್ಗದಲ್ಲಿದ್ದಾರೆ ಎಂಬುದರ ಬಗ್ಗೆ ಬೇರೆ ಬಸ್ಗಳ ಚಾಲಕ–ನಿರ್ವಾಹಕರು ಪರಸ್ಪರ ಮಾಹಿತಿ ಹಂಚಿಕೊಳ್ಳುತ್ತಿರುವುದು ಗಮನಕ್ಕೆ ಬಂದಿದೆ.
‘ಆದಾಯ ಸೋರಿಕೆಯನ್ನು ಪರಿಣಾಮಕಾರಿಯಾಗಿ ತಡೆಯಲು ಮತ್ತು ಸಂಭವನೀಯ ಅಪಘಾತ ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ. ಕರ್ತವ್ಯದ ಸಮಯದಲ್ಲಿ ಈ ಸಿಬ್ಬಂದಿ ಮೊಬೈಲ್ ದೂರವಾಣಿಯನ್ನು ನಿಷ್ಕ್ರಿಯಗೊಳಿಸಿ ತಮ್ಮ ಸ್ವಂತ ಪೆಟ್ಟಿಗೆಯಲ್ಲಿ ಇಟ್ಟುಕೊಳ್ಳಬೇಕು’ ಎಂದು ಸುತ್ತೋಲೆಯಲ್ಲಿ ತಿಳಿಸಿದೆ.
‘ಮೊಬೈಲ್ ನಿಷ್ಕ್ರಿಯಗೊಳಿಸಿಯೂ ಪೆಟ್ಟಿಗೆಯಲ್ಲಿ ಇಡದೆ ತಮ್ಮ ಬಳಿಯೇ ಇಟ್ಟುಕೊಂಡಿದ್ದರೆ ಕೆಂಪು ಗುರುತಿನ(ಆರ್ಎಂಸಿ) ಪ್ರಕರಣ ಎಂದು ಪರಿಗಣಿಸಲಾಗುವುದು. ತನಿಖಾ ಸಿಬ್ಬಂದಿ ಬಂದಾಗ ಮೊಬೈಲ್ ದೂರವಾಣಿ ಬಳಕೆ ಮಾಡುತ್ತಿರುವುದು ಕಂಡು ಬಂದರೆ ಅತಿ ಗಂಭೀರ ಕೆಂಪು ಗುರುತಿನ(ಒಆರ್ಎಂಸಿ) ಪ್ರಕರಣ ಎಂದು ಪರಿಗಣಿಸಲಾಗುವುದು. ದೂರವಾಣಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.
‘ಈ ಆದೇಶ ಉಲ್ಲಂಘಿಸಿ ಪದೇ ಪದೇ ಮೊಬೈಲ್ ಬಳಿಕೆ ಮಾಡಿ ಸಿಕ್ಕಿಬಿದ್ದರೆ ಅಮಾನತುಗೊಳಿಸುವ ಅಧಿಕಾರವನ್ನು ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ನೀಡಲಾಗಿದೆ’ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸ ತಿಳಿಸಿದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ