ಮಂಗಳೂರು : ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ದ.ಕ ಜಿಲ್ಲಾ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಬ್ಲಡ್ ಸೈಬೋ ಇದರ ಯಶಸ್ವಿ ನೂರನೇ ರಕ್ತದಾನ ಶಿಬಿರವು ಇಲ್ಲಿನ ಪುರಭವನದಲ್ಲಿ ಆಗಷ್ಟ್ 18 ಆದಿತ್ಯವಾರದಂದು ನಡೆಯಲಿದೆ.
ದ.ಕ ಜಿಲ್ಲಾ ಎಸ್ಸೆಸ್ಸೆಫ್ಫ್ ಅಧ್ಯಕ್ಷರಾಗಿರುವ ಇಬ್ರಾಹಿಂ ಸಖಾಫಿ ಸೆರ್ಕಳ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲೆಯ 500 ದಾನಿಗಳಿಂದ ರಕ್ತದಾನ ನಡೆಯಲಿದ್ದು,ಜಿಲ್ಲೆಯ ಪ್ರತಿಷ್ಟಿತ 5 ಆಸ್ಪತ್ರೆಗಳಾದ,ವೆನ್ಲಾಕ್ ಜಿಲ್ಲಾ ಆಸ್ಪತ್ರೆ,ಎ.ಜೆ,ಲೇಡಿಗೋಷನ್,ಯೆನೆಪೋಯ,ಕೆ.ಎಂ.ಸಿ ಆಸ್ಪತ್ರೆಗಳ ಸಹಭಾಗಿತ್ವದಲ್ಲಿ ರಕ್ತ ಸಂಗ್ರಹಣೆ ನಡೆಯಲಿದೆ.
ಜಿಲ್ಲೆಯಲ್ಲಿ 105 ಬಾರಿ ರಕ್ತದಾನ ಮಾಡಿದ ಸುಧಾಕರ್ ರೈ ಸುಳ್ಯ,ಬ್ಲಡ್ ಸೈಬೋ ಸ್ಥಾಪಕ ನಾಯಕ ಹಾಗೂ ಎಸ್ ವೈ ಎಸ್ ರಾಜ್ಯಧ್ಯಕ್ಷ ಜಿ.ಎಂ ಸಖಾಫಿ,50 ಬಾರಿ ರಕ್ತದಾನ ಮಾಡಿದ ಇಸ್ಮಾಯಿಲ್ ಮಾಸ್ಟರ್,ಸೇರಿದಂತೆ ಹಲವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಎಸ್ಸೆಸ್ಸೆಫ್ ದ.ಕ ಜಿಲ್ಲಾ ಬ್ಲಡ್ ಸೈಬೋ ಅಧೀನದಲ್ಲಿ ಈ ಹಿಂದೆ ಜಿಲ್ಲೆಯ 99 ಕಡೆಯಲ್ಲಿ ನಡೆದ ರಕ್ತದಾನ ಶಿಬಿರದಿಂದ ಗರಿಷ್ಟ 6412 ಯುನಿಟ್ ರಕ್ತವನ್ನು ಸಂಗ್ರಹಿಸಲಾಗಿದ್ದು,ಜಿಲ್ಲೆಯಲ್ಲಿ ರಕ್ತದ ಬೇಡಿಕೆ ಹೆಚ್ಚಿರುವುದರಿಂದ ಜಾತಿ ಮತಗಳಿಗತೀತವಾಗಿ 7103 ಯುನಿಟ್ ರಕ್ತವನ್ನು ಕೇವಲ ಎರಡು ವರ್ಷದಲ್ಲಿ ದಾನ ಮಾಡಲಾಗಿದೆ.
ಕಾರ್ಯಕ್ರಮದಲ್ಲಿ ರಾಜ್ಯ ಎಸ್ಸೆಸ್ಸೆಫ್ಫ್ ಅಧ್ಯಕ್ಷ ಸಿಟಿಎಂ ತಂಙಳ್ ಮನ್ಶರ್,
ಸ್ತಳೀಯ ಶಾಸಕರಾದ ವೇದವಾಸ್ ಕಾಮತ್,ಯುಟಿ ಕಾದರ್,ಅಲ್ಲದೆ ಮುಸ್ಲಿಂ ಜಮಾಅತ್,ಎಸ್ ವೈ ಎಸ್ ,ಎಸ್ಸೆಸ್ಸೆಫ್ಫ್ ನಾಯಕರು ಹಾಗೂ ವಿವಿಧ ಮುಂದಾಳುಗಳು ಭಾಗವಹಿಸಲಿದ್ದಾರೆ.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ