ಕೊಲಂಬೊ: ಈಸ್ಟರ್ ಬಾಂಬ್ ಸ್ಫೋಟದ ಬಳಿಕ ಗ್ರಾಹಕರು ಮುಸ್ಲಿಂ ಅಂಗಡಿಗಳಿಂದ ಖರೀದಿಸುವುದನ್ನು ನಿಲ್ಲಿಸಿದ್ದಾರೆ.
ಕೆಲವು ತಿಂಗಳ ಹಿಂದೆ ಪಶ್ಚಿಮ ಶ್ರೀಲಂಕಾದ ತಮ್ಮ ಅಂಗಡಿಯು ಅಭಿವೃದ್ಧಿ ಹೊಂದುತ್ತಿದೆ ಎಂದು ಹೇಳಿದ್ದ ಹಾರ್ಡ್ವೇರ್ ಅಂಗಡಿ ಮಾಲೀಕರಾದ ಮೊಹಮ್ಮದ್ ಇಲ್ಯಾಸ್ ಅವರು ಈಗ ಅವರ ವ್ಯಾಪಾರ ಕುಸಿದಿದೆ ಮತ್ತು ಭಾರೀ ನಷ್ಟವುಂಟಾಗಿದೆ ಎಂದಿದ್ದಾರೆ.
ಅವರ ಅಂಗಡಿಯು ರಾಜಧಾನಿ ಕೊಲಂಬೊದಿಂದ 90 ಕಿಲೋಮೀಟರ್ ದೂರದಲ್ಲಿರುವ ಕೊಟ್ಟರಮುಲ್ಲಾ ಗ್ರಾಮದಲ್ಲಿದೆ, ಅಲ್ಲಿ ಮುಸ್ಲಿಮರು ಅಲ್ಪಸಂಖ್ಯಾತರಾಗಿದ್ದು, ಬಹುಪಾಲು ಸಿಂಹಳೀಯರು ವಾಸಿಸುತ್ತಿದ್ದಾರೆ. ದಶಕಗಳಿಂದ, ಇಲ್ಯಾಸ್ ಎಲ್ಲಾ ಧರ್ಮೀಯರೊಂದಿಗೂ ಉತ್ತಮ ವ್ಯವಹಾರ ನಡೆಸುತ್ತಿದ್ದರು.ಆದರೆ ಏಪ್ರಿಲ್ನಲ್ಲಿ ಶ್ರೀಲಂಕಾದ ಈಸ್ಟರ್ ಸಂಡೆ ಬಾಂಬ್ ಸ್ಫೋಟದ ನಂತರ ಎಲ್ಲವೂ ಬದಲಾಗಿದೆ.
ಬಿಬಿಸಿ ಅವರನ್ನು ಉಲ್ಲೇಖಿಸಿ, “ಈಸ್ಟರ್ ಸಂಡೆ ಬಾಂಬ್ ಸ್ಫೋಟದ ನಂತರ,ಸಿಂಹಳೀಯ ಗ್ರಾಹಕರಲ್ಲಿ ಸುಮಾರು 90% ಜನರು ನನ್ನ ಅಂಗಡಿಯಿಂದ ಖರೀದಿಸುವುದನ್ನು ನಿಲ್ಲಿಸಿದ್ದಾರೆ. ನನ್ನ ವ್ಯವಹಾರವು ಗಮನಾರ್ಹವಾಗಿ ಕುಸಿದಿದೆ ಮತ್ತು ನಾನು ಲಕ್ಷಾಂತರ ರೂಪಾಯಿಗಳ ನಷ್ಟ ಅನುಭವಿಸುತ್ತಿದ್ದೇನೆ. “
ಇಲಿಯಾಸ್ ಮಾತ್ರವಲ್ಲ, ಅನೇಕ ಮುಸ್ಲಿಮರು ಇದೇ ಅಭಿಪ್ರಾಯವನ್ನು ಹೇಳುತ್ತಿದ್ದು, ಬಾಂಬ್ ಸ್ಫೋಟದ ಬಳಿಕ ನಮ್ಮನ್ನು ರಾಕ್ಷಸರಂತೆ ಭಾವಿಸುತ್ತಿದ್ದಾರೆ ಮತ್ತು ಶ್ರೀಲಂಕಾದ ಹಲವಾರು ಭಾಗಗಳಲ್ಲಿ ಮುಸ್ಲಿಂ ಒಡೆತನದ ವ್ಯವಹಾರ ಕೇಂದ್ರ ಮತ್ತು ಮನೆಗಳ ಮೇಲೆ ದಾಳಿ ಮಾಡಲಾಗಿದ್ದು, ಮೇ ತಿಂಗಳಲ್ಲಿ ಭೀಕರ ಹಿಂಸಾಚಾರ ನಡೆದಿದೆ.
ವರದಿಯ ಪ್ರಕಾರ, ಜೂನ್ನಲ್ಲಿ ಹಿರಿಯ ಬೌದ್ಧ ಸನ್ಯಾಸಿಯೊಬ್ಬರು ಸಿಂಹಳೀಯರು ಮುಸ್ಲಿಂ ಅಂಗಡಿಗಳಿಂದ ಖರೀದಿಸದಂತೆ ಬಹಿರಂಗವಾಗಿ ಕರೆ ನೀಡಿದರು. ಆದರೆ, ಈ ಕರೆಯನ್ನು ಹಣಕಾಸು ಸಚಿವ ಮಂಗಳಾ ಸಮರವೀರ ಟೀಕಿಸಿದ್ದರು.
ಶ್ರೀಲಂಕಾದ 22 ಮಿಲಿಯನ್ ಜನರಲ್ಲಿ ಮುಸ್ಲಿಮರು ಸುಮಾರು 10% ರಷ್ಟಿದ್ದರೆ, ಜನಸಂಖ್ಯೆಯ ಸುಮಾರು 12% ಹಿಂದೂಗಳು ಮತ್ತು 7% ಕ್ರಿಶ್ಚಿಯನ್ನರು.
ಈಸ್ಟರ್ ದಿನದಂದು ಏಪ್ರಿಲ್ 21 ರಂದು ಬಾಂಬ್ ದಾಳಿ ನಡೆಸಿದ್ದು 250 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ದ್ವೀಪದಾದ್ಯಂತದ ಮುಸ್ಲಿಮರು ಭಯೋತ್ಪಾದಕ ಕೃತ್ಯಗಳನ್ನು ಖಂಡಿಸಿದ್ದರೂ, ಇದು ಸಿಂಹಳೀಯರ ಕಠಿಣವಾದಿಗಳ ಒಂದು ಭಾಗವನ್ನು ತೃಪ್ತಿಪಡಿಸಿಲ್ಲ.















ಇನ್ನಷ್ಟು ಸುದ್ದಿಗಳು
ಇರಾನ್-ಯುಎಸ್ ಕದನ ವಿರಾಮ: ಡೊನಾಲ್ಡ್ ಟ್ರಂಪ್ ಘೋಷಣೆ- ಇರಾನ್ನಿಂದಲೂ ದೃಢೀಕರಣ
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
“ಬೆಲೆ ಏರಿಕೆ ನನಗೆ ಇಷ್ಟ”-ಇರಾನ್ ಯುದ್ಧದ ಕಾರಣದಿಂದ ಉಂಟಾದ ಬೆಲೆ ಏರಿಕೆಯ ಬಗ್ಗೆ ಟ್ರಂಪ್ ವಿವಾದಾತ್ಮಕ ಹೇಳಿಕೆ
’60 ದಿನಗಳಲ್ಲಿ ಹೊಸ ಕೆಲಸ ಹುಡುಕಿ, ಇಲ್ಲದಿದ್ದರೆ ದೇಶ ತೊರೆಯಿರಿ’- ಭಾರತೀಯ ಉದ್ಯೋಗಿಗಳಿಗೆ ಆತಂಕ
ಗಲ್ಫ್ ನಾಯಕರ ವಿನಂತಿಗೆ ಮನ್ನಣೆ ; ಇರಾನ್ ಮೇಲಿನ ದಾಳಿ ತಾತ್ಕಾಲಿಕ ರದ್ದು- ಟ್ರಂಪ್
‘ಯುದ್ಧ ಕೊನೆಗೊಳಿಸುವುದಕ್ಕೆ ಆದ್ಯತೆ ನೀಡಬೇಕು’- ಅಮೆರಿಕದ 14 ಅಂಶಗಳ ಪ್ರಸ್ತಾವನೆಗೆ ಇರಾನ್ ಪ್ರತಿಕ್ರಿಯೆ
ಕೊಲೆ ಬೆದರಿಕೆ, ದಂಗೆಯ ಸಾಧ್ಯತೆ; ನಿವಾಸ ಬಿಟ್ಟು ಹೊರಬಾರದ ಪುಟಿನ್- ಭದ್ರತಾ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆ
ಇರಾಕ್ನ ನೂತನ ಪ್ರಧಾನ ಮಂತ್ರಿಯಾಗಿ ಉದ್ಯಮಿ ಅಲಿ ಅಲ್-ಝೈದಿ ಆಯ್ಕೆ- ದೇಶದ ರಾಜಕೀಯದಲ್ಲಿ ಹೊಸ ಯುಗ?
ಅಮೆರಿಕಕ್ಕೆ ಇರಾನ್ನಿಂದ ‘ಬಿಗ್ ಡೀಲ್’: ಹೋರ್ಮುಜ್ ಜಲಸಂಧಿ ತೆರೆಯಲು ಸಿದ್ಧ, ಆದರೆ ಒಂದು ಷರತ್ತು!
ಟ್ರಂಪ್ ಔತಣಕೂಟದಲ್ಲಿ ಶೂಟೌಟ್: ನಾಸಾ ಫೆಲೋಶಿಪ್ ಪಡೆದ ಎಂಜಿನಿಯರ್ ಬಂಧನ