ನವದೆಹಲಿ(ಆ.16): ಭಾರತ ಸರಕಾರವು ಜಮ್ಮು-ಕಾಶ್ಮೀರದ ವಿಶೇಷಾಧಿಕಾರ ರದ್ದುಗೊಳಿಸಿದ ವಿಚಾರವಾಗಿ ಇಂದು ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಕ್ಲೋಸ್ ಡೋರ್ ಮೀಟಿಂಗ್ ನಡೆಯಿತು. ಮಂಡಳಿಯ ಎಲ್ಲಾ ಐದು ಖಾಯಂ ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳು ಈ ಅನೌಪಚಾರಿಕ ಸಭೆಯಲ್ಲಿ ಪಾಲ್ಗೊಂಡಿದ್ದರು.
ಈ ಸಭೆಯಲ್ಲಿ ವ್ಯಕ್ತವಾದ ವಿಚಾರಗಳು ಅಧಿಕೃತವಾಗಿ ಬಹಿರಂಗವಾಗದಿದ್ದರೂ ಒಂದಷ್ಟು ವಿಷಯಗಳು ಬೆಳಕಿಗೆ ಬಂದಿವೆ. ಅದರ ಪ್ರಕಾರ, ಸಭೆಯಲ್ಲಿ ಪಾಕಿಸ್ತಾನಕ್ಕೆ ಚೀನಾದ ಬೆಂಬಲ ಮಾತ್ರವೇ ಸಿಕ್ಕಿದೆ. ಉಳಿದ ನಾಲ್ಕು ರಾಷ್ಟ್ರಗಳು ಭಾರತದ ನಿಲುವಿಗೆ ಬೆಂಬಲ ನೀಡಿವೆ ಎನ್ನಲಾಗಿದೆ. ಒಟ್ಟಾರೆಯಾಗಿ, ಜಮ್ಮು-ಕಾಶ್ಮೀರ ವಿಚಾರದಲ್ಲಿ ಎಲ್ಲೆ ಮೀರದಂತೆ ಸಂಯಮ ವಹಿಸಬೇಕೆಂದು ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳಿಗೆ ಭದ್ರತಾ ಮಂಡಳಿ ಬುದ್ಧಿ ಮಾತು ಹೇಳಿದೆ.
ಅಮೆರಿಕ, ರಷ್ಯಾ, ಫ್ರಾನ್ಸ್, ಬ್ರಿಟನ್ ಮತ್ತು ಚೀನಾ ದೇಶಗಳು ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಖಾಯಂ ಸದಸ್ಯ ರಾಷ್ಟ್ರಗಳಾಗಿವೆ. ಭಾರತೀಯ ಕಾಲಮಾನ ಸಂಜೆ 7:30ಕ್ಕೆ ಪ್ರಾರಂಭವಾದ ಯುಎನ್ಎಸ್ಸಿ ಭದ್ರತಾ ಮಂಡಳಿಯ ಅನೌಪಚಾರಿಕ ಸಮಾಲೋಚನೆ ಸಭೆ ಸುಮಾರು 70 ನಿಮಿಷಗಳ ಕಾಲ ನಡೆದಿದೆ. ಕಾಶ್ಮೀರದಲ್ಲಿ ನಡೆದಿರುವ ಬೆಳವಣಿಗೆಯಿಂದ ಎರಡೂ ದೇಶಗಳ ಮಧ್ಯೆ ಸೃಷ್ಟಿಯಾಗಿರುವ ಪ್ರಕ್ಷುಬ್ದ ವಾತಾವರಣದ ಬಗ್ಗೆ ಮಂಡಳಿ ಆತಂಕ ವ್ಯಕ್ತಪಡಿಸಿತು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ