ಕುವೈತ್ ಸಿಟಿ: ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಕುವೈತ್ ರಾಷ್ಟ್ರೀಯ ಸಮಿತಿಯ ವತಿಯಿಂದ ಆಗಸ್ಟ್ 15ರ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮವು ಕೆಸಿಎಫ್ ಅಧ್ಯಕ್ಷರಾದ ಅಬ್ದುಲ್ ರಹ್ಮಾನ್ ಸಖಾಫಿ ರವರ ಅಧ್ಯಕ್ಷತೆಯಲ್ಲಿ ಜರಗಿತು.
ಕೆಸಿಎಫ್ ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಝಕರಿಯ ಆನೇಕಲ್ ಸ್ವಾಗತಿಸಿದರು. ಕಾರ್ಯಕ್ರಮದ ಉದ್ಘಾಟನೆ ಯನ್ನು ಕೆಸಿಎಫ್ ರಾಷ್ಟ್ರೀಯ ಕೋಶಾಧಿಕಾರಿ ಮೂಸ ಇಬ್ರಾಹಿಂ ರವರು ನಿರ್ವಹಿಸಿ,ಸ್ವಾತಂತ್ರ ಕುರಿತು ಮಾತಾನಾಡಿ ಸೌಹಾರ್ದ ಶಾಂತಿಯ ಮೂಲಕ ಸ್ವಾತಂತ್ರ ಆಚರಿಸಲು ತಿಳಿಸಿದರು.
ಅದೇ ರೀತಿ ಪ್ರಾಸ್ತಾವಿಕ ಭಾಷಣ ಮಾಡಿದ ಕೆಸಿಎಫ್ ಸಾಂತ್ವನ ವಿಭಾಗದ ಚೇರ್ಮನ್ ಯಾಕುಬ್ ಕಾರ್ಕಳ ರವರು ಸ್ವಾತಂತ್ರ ಹೋರಾಟದಲ್ಲಿ ಮಡಿದಂತಹ ಹಲವಾರು ಹುತಾತ್ಮ ರನ್ನು ನೆನಪಿಸುತ್ತಾ ಸ್ವಾತಂತ್ರ ಸಂಗ್ರಾಮದಲ್ಲಿ ಹೋರಾಡಿದ ಹೋರಾಟ ಗಾರರನ್ನು ಸ್ಮರಿಸಿದರು. ವಿಶೇಶ ವಾಗಿ ಸ್ವಾತಂತ್ರ ಹೋರಾಟದಲ್ಲಿ ಮಹಾತ್ಮ ಗಾಂದಿ, ಶೌಖತ್ ಅಲಿ, ಟಿಪ್ಪು ಸುಲ್ತಾನರ ಕೊಡುಗೆ ಯನ್ನು ಮುಂದಿಟ್ಟು ವಿವರಿಸಿದರು.
ಮತ್ತು ಕೆಸಿಎಫ್ ಅಂತರರಾಷ್ಟ್ರೀಯ ಆಡಳಿತ ವಿಭಾಗದ ಕಾರ್ಯದರ್ಶಿ ಹಾಗೂ ಕೆಸಿಎಫ್ ಕುವೈತ್ ಸಂಘಟನಾ ಅಧ್ಯಕ್ಷರಾದ ಹುಸೈನ್ ಎರ್ಮಾಡ್ ಸ್ವಾತಂತ್ರೋತ್ಸವದ ಶುಭ ಹಾರೈಸಿದರು. ಕೆಸಿಎಫ್ ಅಧ್ಯಕ್ಷರು ಮಾತನಾಡಿ ಶಾಂತಿ ಸೌಹಾರ್ದದಿಂದ ನಾವೆಲ್ಲರೂ ಬದುಕ ಬೇಕೆಂದು ತಿಳಿ ಹೇಳಿದರು ಹಾಗೂ ಇತ್ತೀಚೆಗೆ ನಡೆದಂತ ಪ್ರವಾಹಪೀಡಿತ ಪ್ರದೇಶ ಗಳಿಗೆ ಸಹಾಯ ಹಸ್ತ ನೀಡಬೇಕಾಗಿ ತಿಳಿಸಿದರು.
ಕೆಸಿಎಫ್ ಸೌತ್ ಝೋನ್ ಕಾರ್ಯದರ್ಶಿ ಶಾಹುಲ್ ಹಮೀದ್ ‘ಸ’ಅದಿ ಝುಹ್ರಿ ದುವಾ ನೆರವೇರಿಸಿದರು. ಕೊನೆಯಲ್ಲಿ ಸಿಹಿ ತಿಂಡಿ ವಿತರಿಸಲಾಯಿತು. ಸಂಘಟನಾ ಕಾರ್ಯದರ್ಶಿ ತೌಫಿಕ್ ಅಡ್ಡೂರು ಎಲ್ಲರಿಗೂ ಧನ್ಯವಾದ ಗೈದರು.
ವರದಿ. ಇಬ್ರಾಹಿಂ ವೇಣೂರು
ಪ್ರಕಾಶನ ವಿಭಾಗ ಕೆಸಿಎಫ್ ಕುವೈತ್















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ