ಉಡುಪಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಸಲಹೆ ಪಡೆದು ಫೋನ್ ಟ್ಯಾಪಿಂಗ್ ವಿಚಾರವನ್ನು ಸಿಬಿಐ ತನಿಖೆಗೆ ಕೊಟ್ಟಿದ್ದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೃತಜ್ಞತೆ ತಿಳಿಸಿದ್ದಾರೆ.
ಉಡುಪಿಯಲ್ಲಿಂದು ಮಾಧ್ಯಮಗಳೊಂದಿಗೆ ಭಾನುವಾರ ಮಾತನಾಡಿದ ಅವರು, ಫೋನ್ ಟ್ಯಾಪಿಂಗ್ ವಿಚಾರದಲ್ಲಿ ಯಾವುದೇ ರೀತಿಯ ತನಿಖೆಗೆ ಮುಕ್ತವಾಗಿದ್ದೇನೆ ವಯಕ್ತಿಕವಾಗಿ ನನಗೆ ಯಾವುದೇ ಆತಂಕ ಇಲ್ಲ ಎಂದು ಕುಮಾರಸ್ವಾಮಿ ಹೇಳಿದರು.
ಕುಮಾರಸ್ವಾಮಿಯನ್ನು ಹತ್ತಿಕ್ಕಲು ಇದೊಂದು ಅಸ್ತ್ರ ಎಂದು ಕೆಲವು ಮಾಧ್ಯಮಗಳು ಹೇಳುತ್ತಿವೆ ಎಂದು ಖಾಸಗಿ ವಾಹಿನಿಗಳನ್ನು ಮಾಜಿ ಸಿಎಂ ತರಾಟೆಗೆ ತೆಗೆದುಕೊಂಡರು.
ಯಾವ ಅಸ್ತ್ರವು ಇಲ್ಲ, ಎಲ್ಲಾ ಅಸ್ತ್ತ ನಿಶ್ಯಸ್ತ್ರ ಆಗುತ್ತದೆ. ಎಷ್ಟೇ ಪ್ರಯತ್ನ ಮಾಡಿದರು ನಿಮಗೆ ಯಾವುದೇ ಫಲ ಸಿಗಲ್ಲ, ನಾನು ನನ್ನ ಆತ್ಮಸಾಕ್ಷಿಗೆ ಸರಿಯಾಗಿ ಕೆಲಸ ಮಾಡಿದವನು. ಕಳೆದ 14 ತಿಂಗಳ ಆಡಳಿತದಲ್ಲಿ ನಾನು ತಪ್ಪು ಮಾಡಿಲ್ಲ, ನಾನ್ಯಾಕೆ ಭಯ ಪಡಬೇಕು ನಾನೇನು ಚೆಕ್ ಮುಖಾಂತರ ಹಣ ಪಡೆದಿಲ್ಲ, ರಾಜ್ಯ ಲೂಟಿ ಮಾಡಿಲ್ಲ ಎಂದು ಕುಮಾರಸ್ವಾಮಿ ನುಡಿದರು.
ಆಪರೇಷನ್ ಕಮಲದ ಹೆಸರಲ್ಲಿ ಆದ ಸೂಟ್ ಕೇಸ್ ವ್ಯಾಪಾರದ ತನಿಖೆನೂ ಆಗಲಿ ಈ ಬಗ್ಗೆ ಕೂಡ ಸಿದ್ದರಾಮಯ್ಯ ಆಗ್ರಹ ಮಾಡಿದ್ದಾರೆ. ಆ ಕೆಲಸನು ಪರಿಗಣಿಸಿ ಸಿಬಿಐಗೆ ಒಳಪಡಿಸಲಿ, ಇನ್ನೂ ಹಿಂದಿನ ಹದಿನೈದು ವರ್ಷಗಳ ಎಲ್ಲಾ ಸರ್ಕಾರದ ಅವಧಿಯಲ್ಲಿ ಏನಾಗಿದೆ ತನಿಖೆ ಆಗಲಿ ಎಂದು ಕುಮಾರಸ್ವಾಮಿ ಆಗ್ರಹ ಮಾಡಿದರು.
ನಂತರ ಮಾತನಾಡಿದ ಅವರು, ನನ್ನ ಹೋರಾಟ ತನಿಖೆಯಿಂದ ನಿಲ್ಲಿಸಲು ಸಾಧ್ಯವಿಲ್ಲ, ನಮ್ಮ ಸರ್ಕಾರ ವರ್ಗಾವಣೆ ದಂಧೆ ಮಾಡಿದೆ ಎಂದು ಆರೋಪಿಸಿದ್ದಾರೆ. ಯಲಹಂಕ ತಹಸೀಲ್ದಾರ್ ಪೋಸ್ಟ್ ಗೆ ಎಷ್ಟು ವ್ಯವಹಾರ ಆಯ್ತು? ಹೇಳಿ ನಮಗೆ ವರ್ಗಾವಣೆ ಲೂಟಿ ಅಂತೀರ ಎಂದು ಪ್ರಶ್ನೆ ಮಾಡಿದರು. ಇನ್ನೂ ವರ್ಗಾವಣೆ ದಂಧೆಗೆ ಯಡಿಯೂರಪ್ಪ ಸುಪುತ್ರನನ್ನೇ ಬಿಟ್ಟಿದ್ದಾರೆ ಎಂದು ಕುಮಾರಸ್ವಾಮಿ ಇದೇ ವೇಳೆ ಆರೋಪ ಮಾಡಿದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ