ಕೋಲ್ಕತ್ತ: ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಬಂಧನ ವಿಚಾರದಲ್ಲಿ ಸಿಬಿಐ ಅಧಿಕಾರಿಗಳು ನಡೆದುಕೊಂಡ ರೀತಿ ಮತ್ತು ಅವರನ್ನು ಬಂಧಿಸಿರುವ ಕ್ರಮದ ವಿರುದ್ಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೋಲ್ಕತ್ತದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಾನು ಕಾನೂನಿನ ವಿಚಾರ ಮಾತನಾಡುತ್ತಿಲ್ಲ, ಕೆಲವು ಸಂದರ್ಭಗಳಲ್ಲಿ ತನಿಖಾಧಿಕಾರಿಗಳ ನಡೆ ಸರಿಯಾಗಿರುವುದಿಲ್ಲ ಎಂದಿದ್ದಾರೆ. ಚಿದಂಬರಂ ಹಿರಿಯ ನಾಯಕರು ಹಾಗೇ ದೇಶದ ಹಣಕಾಸು ಸಚಿವರು ಮತ್ತು ಗೃಹಸಚಿವರಾಗಿದ್ದರು. ಅವರ ವಿಚಾರದಲ್ಲಿ ತನಿಖಾಧಿಕಾರಿಗಳು ನಡೆದಕೊಂಡು ರೀತಿ ಸರಿಯಲ್ಲ ಎಂದು ಹೇಳಿದ್ದಾರೆ.
ಸಿಬಿಐ ಅಧಿಕಾರಿಗಳು ಚಿದಂಬರಂ ಅವರ ಮನೆಯ ಹಿಂಬಾಗಿಲಿನಿಂದ ಪ್ರವೇಶ ಮಾಡಿದ್ದು ಹಾಗೂ ಮನೆಯ ಕಾಂಪೌಂಡ್ ಗೋಡೆಗಳನ್ನು ಹತ್ತಿ ಮನೆಯೊಳಗೆ ಪ್ರವೇಶ ಮಾಡಿದ್ದು ಸರಿಯಲ್ಲ ಎಂದು ಅವರು ಹೇಳಿದ್ದಾರೆ. ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರದಲ್ಲಿ ಪಿ.ಚಿದಂಬರಂ ವಿದೇಶಿ ಕಂಪನಿಗಳಿಂದ ಹಣ ಪಡೆದಿದ್ದಾರೆ ಎಂದು ಆರೋಪವಿದೆ.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ