ನವದೆಹಲಿ, ಆ 23: ತ್ರಿವಳಿ ತಲಾಖ್ ಅನ್ನು ಅಪರಾಧೀಕರಣಗೊಳಿಸುವ “ಮುಸ್ಲಿಂ ಮಹಿಳೆಯರ (ವಿವಾಹದ ಹಕ್ಕುಗಳ ರಕ್ಷಣೆ) ಕಾಯ್ದೆ 2019″ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಸಹಿತ ಮೂವರು ಸಲ್ಲಿಸಿದ್ದ ಮನವಿಗಳನ್ನು ಶುಕ್ರವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಸಂಬಂಧ ಕೇಂದ್ರಕ್ಕೆ ನೋಟಿಸ್ ನೀಡಿದೆ.
ನ್ಯಾಯಮೂರ್ತಿಗಳಾದ ಎನ್ ವಿ ರಮಣ ಮತ್ತು ಅಜಯ್ ರಾಸ್ತೋಗಿ ಅವರ ನ್ಯಾಯಪೀಠವು ಕೇಂದ್ರಕ್ಕೆ ನೋಟಿಸ್ ನೀಡಿದೆ.ತ್ರಿವಳಿ ತಲಾಖ್ ನಿಷೇಧ ಮಸೂದೆಯು ಸಂವಿಧಾನದ ನಿಯಮಗಳನ್ನು ಉಲ್ಲಂಘಿಸುತ್ತಿದೆ, ಆದ್ದರಿಂದ ಈ ಮಸೂದೆಯನ್ನು “ಅಸಾಂವಿಧಾನಿಕ” ಎಂದು ಘೋಷಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ವೇಳೆ ಈ ನೋಟಿಸ್ ಜಾರಿ ಮಾಡಲು ಪೀಠ ಸೂಚಿಸಿದೆ.
ಧಾರ್ಮಿಕ ಆಚರಣೆಯನ್ನು ಅನೂರ್ಜಿತವೆಂದು ಘೋಷಿಸಿದರೂ ಅದು ಇನ್ನೂ ನಡೆಯುತ್ತಿರುವುದರ ಬಗ್ಗೆ ನಮಗೆ ಅನುಮಾನವಿದೆ, ಇದು ವರದಕ್ಷಿಣೆ ತರಹದ ಅಪರಾಧವಲ್ಲವೇ?” ಸುಪ್ರೀಂಕೋರ್ಟ್ ಪ್ರಶ್ನಿಸಿತು.
ಅರ್ಜಿದಾರರನ್ನು ಪ್ರತಿನಿಧಿಸಿದ ಹಿರಿಯ ವಕೀಲ ಸಲ್ಮಾನ್ ಖುರ್ಷಿದ್, ಸುಪ್ರೀಂ ಕೋರ್ಟ್ ಈಗಾಗಲೇ ತ್ರಿವಳಿ ತಲಾಖ್ ಅನ್ನು ಅನೂರ್ಜಿತವೆಂದು ಘೋಷಿಸಿದ್ದು, ಈ ಪ್ರಕರಣವನ್ನು ಅಪರಾಧೀಕರಿಸುವ ಅಗತ್ಯವಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು.















ಇನ್ನಷ್ಟು ಸುದ್ದಿಗಳು
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ