ರಿಯಾದ್: ಪ್ರವಾಸೋದ್ಯಮ ವಲಯದಲ್ಲಿ ಸೌದಿಯು ಬಾರಿ ಪ್ರಗತಿ ಸಾಧಿಸಲು ಮುಂದಾಗಿದೆ. ವಿಶ್ವ ಸಂಚಾರಿಗಳನ್ನು ಆಕರ್ಷಿಸಲು ಪ್ರಮುಖ ಜಾಗತಿಕ ಪ್ರವಾಸಿ ಆಕರ್ಷಣಾ ಕೇಂದ್ರಗಳ ಪೈಕಿ ಒಂದನ್ನಾಗಿ ಸೌದಿಯನ್ನು ಪರಿವರ್ತಿಸಲಾಗುವುದು ಎಂದು ಸೌದಿ ಪ್ರವಾಸೋದ್ಯಮ ಆಯೋಗದ ಅಧ್ಯಕ್ಷರು ಹೇಳಿದ್ದಾರೆ. ದೇಶಕ್ಕೆ ಪ್ರವಾಸಿಗರ ಆಗಮನದ ಸಂಖ್ಯೆ ಪ್ರತಿವರ್ಷ ಹೆಚ್ಚುತ್ತಿದೆ ಎಂದವರು ತಿಳಿಸಿದ್ದಾರೆ.
ಈ ಯೋಜನೆಯು ವಾರ್ಷಿಕವಾಗಿ ಲಕ್ಷಾಂತರ ಪ್ರವಾಸಿಗರನ್ನು ದೇಶಕ್ಕೆ ಆಕರ್ಷಿಸುವ ಗುರಿಯನ್ನು ಹೊಂದಿದೆ. ಇದರ ಅಂಗವಾಗಿ ದೇಶದ ವಿವಿಧ ಭಾಗಗಳಲ್ಲಿ ಸೀಸನ್ ಉತ್ಸವಗಳನ್ನು ಆಯೋಜಿಸಲಾಗುತ್ತಿದೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪ್ರತಿಯೊಂದು ಮೇಳಗಳಲ್ಲಿ ಸಂದರ್ಶಕರ ಸಂಖ್ಯೆ ಹೆಚ್ಚುತ್ತಿದೆ.
ವಿಶ್ವ ಪ್ರವಾಸೋದ್ಯಮ ನಕ್ಷೆಯಲ್ಲಿ ದೇಶವನ್ನು ಅಗ್ರ ಐದು ತಾಣಗಳ ಪೈಕಿ ಒಂದನ್ನಾಗಿ ಮಾಡುವುದು ಉದ್ದೇಶವಾಗಿದೆ ಎಂದು ಸೌದಿ ಪ್ರವಾಸೋದ್ಯಮ ಇಲಾಖೆ ಮತ್ತು ರಾಷ್ಟ್ರೀಯ ಪರಂಪರೆ ಆಯೋಗದ ಮುಖ್ಯಸ್ಥರಾಗಿರುವ ಅಹ್ಮದ್ ಅಲ್-ಖತೀಬ್ ಹೇಳಿದರು.ಕ್ರೌನ್ ಪ್ರಿನ್ಸ್ ಮುಹಮ್ಮದ್ ಬಿನ್ ಸಲ್ಮಾನ್ ದೇಶದಲ್ಲಿ ಹೊಸ ಸಾಂಸ್ಕೃತಿಕ ಪರಂಪರೆಯನ್ನು ನಿರ್ಮಿಸಲು ಪ್ರಯತ್ನಿಸುತ್ತಿದ್ದಾರೆ. ಇದು ವಿವಿಧ ಕ್ಷೇತ್ರಗಳಲ್ಲಿ ದೊಡ್ಡ ಬದಲಾವಣೆಗಳಿಗೆ ಕಾರಣವಾಗಲಿದೆ ಎಂದು ಅಹ್ಮದ್ ಅಲ್ ಖತೀಬ್ ಹೇಳಿದ್ದಾರೆ.
ತಾಯಿಫ್ನಲ್ಲಿ ನಡೆಯುವ ಉಕಾದ್ ಮೇಳದಲ್ಲಿ ನಡೆದ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಎರಡು ವಾರಗಳಲ್ಲಿ ಏಳೂವರೆ ಲಕ್ಷಕ್ಕಿಂತಲೂ ಹೆಚ್ಚು ಪ್ರವಾಸಿಗರು ಮೇಳಕ್ಕೆ ಭೇಟಿ ನೀಡಿದರು. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೆಚ್ಚಿನ ಹೂಡಿಕೆ ಮಾಡಲು ಸ್ಥಳೀಯರು ಮುಂದೆ ಬರಬೇಕು ಎಂದು ಅಹ್ಮದ್ ಅಲ್ ಖತೀಬ್ ಹೇಳಿದರು.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು