ನವದೆಹಲಿ: ದೆಹಲಿಯ ನಿವಾಸದಲ್ಲಿ ಪತ್ತೆಯಾದ 8.6 ಕೋಟಿ ಪ್ರಕರಣದ ಸಂಬಂಧ ಇ.ಡಿ. ಬಂಧನಕ್ಕೆ ಒಳಗಾಗಿರುವ ಡಿಕೆ ಶಿವಕುಮಾರ್ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ಬಂಧನದ ಬಳಿಕ ಇ.ಡಿ. ಕಚೇರಿಯಿಂದ ಡಿಕೆಶಿ ಅವರನ್ನು ಅಧಿಕಾರಿಗಳು ಹೊರಗೆ ಕರೆತರುವ ಸಂದರ್ಭದಲ್ಲಿ ಸುತ್ತುವರೆದ ಮಾಧ್ಯಮದವರೊಂದಿಗೆ ಆಕ್ರೋಶಭರಿತರಾಗಿ ಮಾತನಾಡಿದ ಡಿಕೆಶಿ, ಇದೊಂದು ರಾಜಕೀಯ ಷಡ್ಯಂತ್ರ. ಬಿಜೆಪಿಯವರು ತಮ್ಮ ಪರವಾಗಿ ಕೆಲಸ ಮಾಡಲಿಲ್ಲ ಎಂದು ಹೀಗೆ ಮಾಡಿಸಿದ್ದಾರೆ. ನಾನು ಎಲ್ಲವನ್ನೂ ಎದುರಿಸಲು ಸಿದ್ಧವಾಗಿದ್ದೇನೆ. ಹೆದರಿ ಓಡಿಹೋಗುವವನಲ್ಲ. ನನ್ನನ್ನು ಬಂಧಿಸುವಲ್ಲಿ ಬಿಜೆಪಿಯವರು ಯಶಸ್ವಿಯಾಗಿದ್ದಾರೆ. ದೇವರು ಅವರಿಗೆ ಒಳ್ಳೆಯದನ್ನು ಮಾಡಲಿ ಎಂದು ಹೇಳಿದರು.
ಡಿಕೆಶಿ ಬಂಧನಕ್ಕೆ ವಿರೋಧ ವ್ಯಕ್ತಪಡಿಸಿ, ನಾಳೆ ಡಿಕೆ ಶಿವಕುಮಾರ್ ಅವರ ಸ್ವ ಗ್ರಾಮವಾದ ದೊಡ್ಡ ಆಲನಹಳ್ಳಿಗೆ ಬಂದ್ಗೆ ಗ್ರಾಮಸ್ಥರು ಕರೆ ನೀಡಿದ್ದಾರೆ. ನಾಳೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ, ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಹೇಳಿದ್ದಾರೆ.