ನವದೆಹಲಿ,ಸೆ.08: ದೇಶದ ಆರ್ಥಿಕ ಹಿಂಜರಿತದಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ವಾಹನ ಉತ್ಪಾದನಾ ಕಂಪನಿಗಳು ಭರ್ಜರಿ ರಿಯಾಯ್ತಿ ದರ ಘೋಷಣೆ ಮಾಡುವ ಮೂಲಕ ಗ್ರಾಹಕರನ್ನು ಸೆಳೆಯಲು ಮುಂದಾಗಿದೆ.
ಮಾರುತಿ, ಟೊಯೊಟಾ, ಹ್ಯುಂಡೈ, ಹೋಂಡಾದಂಥ ಪ್ರತಿಷ್ಠಿತ ಕಂಪನಿಗಳು ಗೋಡೌನ್ನಲ್ಲಿ ನಿಂತಿರುವ ಕಾರುಗಳ ಮಾರಾಟಕ್ಕೆ ತೀವ್ರ ಸ್ಪರ್ಧೆಗಿಳಿದಿವೆ. ಇದರಿಂದಾಗಿ ಕಾರು ಖರೀದಿಗೆ ಇದು ಸಕಾಲ ಎಂಬ ವಾತಾವರಣ ಸೃಷ್ಟಿಸಲಾಗುತ್ತಿದೆ.
2020ರ ಏಪ್ರಿಲ್ನಿಂದ ಬದಲಾದ ಇಂಧನ ಬಳಕೆ ನಿಯಮಗಳು ಜಾರಿಗೆ ಬರುವುದರಿಂದ ಈಗ ಗೋಡೌನ್ನಲ್ಲಿರುವ ವಾಹನಗಳನ್ನು ಮಾರಾಟ ಮಾಡಿಕೊಳ್ಳುವ ಅನಿವಾರ್ಯತೆ ವಾಹನ ಕಂಪನಿಗಳಿಗಿದೆ. ಹೀಗಾಗಿ ಬಹುತೇಕ ಕಂಪನಿಗಳು ಗ್ರಾಹಕನಿಗೆ ಭರ್ಜರಿ ಆಫರ್ ಕೊಡುವ ಪ್ರಕ್ರಿಯೆಗೆ ಈಗಾಗಲೇ ಚಾಲನೆ ನೀಡಿದೆ.
ದೇಶದ ನಂ.1 ವಾಹನ ಉತ್ಪಾದನಾ ಕಂಪನಿಯಾದ ಮಾರುತಿ ಸುಜುಕಿ 30,000ದಿಂದ 1.2 ಲಕ್ಷ ರು.ತನಕ ಮುಖ ಬೆಲೆಯ ಮೇಲೆ ಕಡಿತಗೊಳಿಸಿ ಮಾರಾಟಕ್ಕೆ ಮುಂದಾಗಿದೆ. ಆಲ್ಟೋ ಎಂಟ್ರಿ ಮಾಡೆಲ್ಗಳ ಬೆಲೆಯನ್ನೇ 18-20% ಕಡಿತಗೊಳಿಸಿದೆ. ಅದೇ ಪ್ರಕಾರ ಹ್ಯುಂಡೈ ಕೂಡ ಗ್ರಾಂಡ್ ಐ10 ಕಾರಿನ ಮೇಲೆ ಶೇ.15ರಷ್ಟುಆಫರ್ ನೀಡುತ್ತಿದೆ. ಹೋಂಡಾ 42,000ದಿಂದ 4,00,000ದಷ್ಟುಕಡಿತಗೊಳಿಸಿದ್ದು, ಸಿಆರ್ವಿ ಮತ್ತು ಬಿಆರ್ವಿ ಕಾರುಗಳನ್ನು ಭಾರಿ ರಿಯಾಯ್ತಿ ದರದಲ್ಲಿ ಮಾರಾಟಕ್ಕೆ ಮುಂದಾಗಿದೆ.
ಸದ್ಯಕ್ಕೆ ಕಂಪನಿಗಳು ಘೋಷಿಸಿಕೊಂಡಿರುವ ಪ್ರಕಾರ ಹೋಂಡಾ ಸಿಆರ್ವಿ, ಬಿಆರ್ವಿ ಕಾರುಗಳ ಮೇಲೆ ಕ್ರಮವಾಗಿ 4 ಲಕ್ಷ ಮತ್ತು 1.10 ಲಕ್ಷ ರು. ಕಡಿತಗೊಳಿಸಲಾಗಿದೆ. ಟೊಯೊಟಾ ಯಾರೀಸ್ ಸೆಡಾನ್ ಕಾರಿನ ಮೇಲೆ 2.50 ಲಕ್ಷ ರು. ಕಡಿತಗೊಳಿಸಲಾಗಿದೆ. ಹ್ಯೂಂಡೈ ಗ್ರಾಂಡ್ ಐ10 ಮತ್ತು ಸ್ಯಾಂಟ್ರೋ ಕಾರಿನ ಮೇಲೆ ಕ್ರಮವಾಗಿ 85 ಸಾವಿರ ಮತ್ತು 40 ಸಾವಿರ ಕಡಿತಗೊಳಿಸಲಾಗಿದೆ. ಮಾರುತಿ ಸುಝುಕಿ ಕಾರುಗಳಾದ ಎಸ್.ಕ್ರಾಸ್ ಮೇಲೆ 1.12 ಲಕ್ಷ ರು, ವಿತಾರಾ ಬ್ರೆಝಾ ಮೇಲೆ 1.01 ಲಕ್ಷ ರು. ಕಡಿತಗೊಳಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ