ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ತೆಗೆದುಹಾಕಿದ ನಂತರ ಗೃಹ ಬಂಧನದಲ್ಲಿರುವ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಂಬಂಧ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಮತ್ತು ಜಮ್ಮು-ಕಾಶ್ಮೀರ ಆಡಳಿತ ಬಳಿ ಪ್ರತಿಕ್ರಿಯೆ ಕೇಳಿದೆ.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ನ್ಯಾಯಮೂರ್ತಿಗಳಾದ ಎಸ್ ಎ ಬೊಬ್ಡೆ ಮತ್ತು ಎಸ್ ಎ ನಾಜೀರ್ ಅವರನ್ನೊಳಗೊಂಡ ನ್ಯಾಯಪೀಠ ಕೇಂದ್ರ ಹಾಗೂ ರಾಜ್ಯಕ್ಕೆ ನೊಟೀಸ್ ಜಾರಿ ಮಾಡಿ ರಾಜ್ಯಸಭಾ ಸದಸ್ಯ ಎಂಡಿಎಂಕೆ ನಾಯಕ ವೈಕೊ ಅವರ ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಕಾಯ್ದಿರಿಸಿದೆ.
ಯಾವುದೇ ಅಧಿಕೃತ ಕಾನೂನು ಇಲ್ಲದೆ ಫಾರೂಕ್ ಅಬ್ದುಲ್ಲಾ ಅವರನ್ನು ಅನಧಿಕೃತವಾಗಿ ಗೃಹಬಂಧನದಲ್ಲಿಡುವ ಮೂಲಕ ಅವರ ಸಾಂವಿಧಾನಿಕ ಹಕ್ಕುಗಳನ್ನು ಕಸಿಯಲಾಗಿದೆ ಎಂದು ತಮಿಳುನಾಡಿನ ರಾಜ್ಯ ಸಭಾ ಸದಸ್ಯ ಎಂಡಿಎಂಕೆ ನಾಯಕ ವೈಕೊ ಸುಪ್ರೀಂ ಕೋರ್ಟ್ ನಲ್ಲಿ ಆಕ್ಷೇಪ ಅರ್ಜಿ ಸಲ್ಲಿಸಿದ್ದರು. ಅವರು ಚೆನ್ನೈಯಲ್ಲಿ ನಿನ್ನೆ ಆಯೋಜಿಸಿದ್ದ ಸಮ್ಮೇಳನದಲ್ಲಿ ಭಾಗವಹಿಸಲು ಫಾರೂಕ್ ಅಬ್ಜುಲ್ಲಾ ಅವರಿಗೆ ಅವಕಾಶ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ