ಮೂಡಬಿದ್ರೆ: ನಿರಂತರವಾಗಿ 2 ತಿಂಗಳುಗಳಿಂದ ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ಸಹಾಯ ಮಾಡಲು ಮುಂಚೂಣಿಯಲ್ಲಿ ನಿಂತ SSF ಮೂಡಬಿದ್ರೆ ಡಿವಿಶನ್ ಕೋಶಾಧಿಕಾರಿ ನಜೀಬ್ ರವರಿಗೆ ಇಂದು ನಡೆದ ಮಾಸಿಕ ಸಭೆಯಲ್ಲಿ ಸನ್ಮಾನಿಸಲಾಯಿತು. 3 ಬಾರಿ ಉತ್ತರ ಕರ್ನಾಟಕದ ಬಾಗಲಕೋಟೆ , ಹಾಗೂ ಬೆಳಗಾವಿಗೆ ತೆರಳಿ ನೆರೆ ಸಂತ್ರಸ್ತರಿಗೆ ಅಗತ್ಯ ಸಾಮಾಗ್ರಿಗಳನ್ನು ಹಾಗೂ ಎಜುಕಿಟ್ ಗಳನ್ನು ಸುಮಾರು 10 ಲಕ್ಷ ರೂಪಾಯಿ ವೆಚ್ಚದಲ್ಲಿ ವಿತರಿಸಲಾಗಿದೆ.
ಇನ್ನೂ ಕೂಡ ಒಂದು ಟ್ರಿಪ್ ಅವರ ನೇತೃತ್ವದಲ್ಲಿ ಅತೀ ಶೀಘ್ರದಲ್ಲಿ ಸುಮಾರು 4 ಲಕ್ಷ ವೆಚ್ಚದ ಕಿಟ್ ವಿತರಣೆಯಾಗಲಿದೆ. ಈ ಎಲ್ಲಾ ಕಾರ್ಯಗಳನ್ನು ಮನಗಂಡು ಇಂದು ಸನ್ಮಾನಿಸಲಾಯಿತು. ಹಾಗೂ ಇದಕ್ಕಾಗಿ ಸಹಕರಿಸಿದ ಎಲ್ಲರನ್ನೂ ಈ ವೇಳೆ ಅಭಿನಂದಿಸಲಾಯಿತು.
ಸನ್ಮಾನವನ್ನು ಡಿವಿಶನ್ ಅಧ್ಯಕ್ಷರಾದ ರಿಯಾಝ್ ಸಅದಿ ನೆರವೇರಿಸಿದರು. ಕಾರ್ಯದರ್ಶಿಯಾದ ಸಿದ್ದೀಕ್ ಬಜ್ಪೆ ಹಾಗೂ ಕಾರ್ಯಕಾರಿ ಸದಸ್ಯರು ಹಾಜರಿದ್ದರು.
SSF ಮೂಡಬೆದ್ರೆ ಡಿವಿಶನ್ ಮೀಡಿಯಾ ವಿಂಗ್















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ