ಸಾಲೆತ್ತೂರ್: (ಸೆ19) ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್ (ಎಸ್.ಎಸ್.ಎಫ್) ಇದರ ಧ್ವಜ ದಿನಾಚರಣೆಯ ಪ್ರಯುಕ್ತ ಎಸ್ಸೆಸ್ಸೆಫ್ ಮಿತ್ತರಾಜೆ ಶಾಖೆಯ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮವು ಪಂಜರಕೋಡಿ ರಿಫಾಇಯ್ಯ ಜುಮಾ ಮಸೀದಿ ಆವರಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಅಲ್ಲಿಂ ಶರೀಫ್ ಹನೀಫಿ ಮಾರ್ನಾಡ್ ಸ್ವಾಗತಿಸಿದರು, ಪಂಜರಕೋಡಿ ಜುಮಾ ಮಸೀದಿ ಖತೀಬರಾದ ಅಬೂಬಕರ್ ಮದನಿ ಉಸ್ತಾದ್ ಹಾಗೂ ಎಸ್ಸೆಸ್ಸೆಫ್ ಮಿತ್ತರಾಜೆ ಶಾಖೆಯ ಅಧ್ಯಕ್ಷರಾದ ದಾವುದ್’ರವರು ಸೇರಿ ಧ್ವಜಾರೋಹಣ ನೆರವೇರಿಸಿದರು, ನಂತರ ಉಸ್ತಾದ್ ಹಿತೋಪದೇಶ ನೀಡಿದರು, ಜುಮಾ ಮಸೀದಿ ಪ್ರದಾನ ಕಾರ್ಯದರ್ಶಿ ಉಮ್ಮರ್ ಅಬ್ಬೆಮ್ಮಾರ್ರವರು ಧನ್ಯವಾದಗೈದರು.

ಕಾರ್ಯಕ್ರಮದಲ್ಲಿ ಪಂಜರಕೋಡಿ ರಿಫಾಇಯ್ಯ ಜುಮಾ ಮಸೀದಿ ಅಧ್ಯಕ್ಷರಾದ ಮಜೀದ್ ಕಲ್ಲಕಟ್ಟ, ಕೊಳ್ನಾಡು ಗ್ರಾಮ ಪಂಚಾಯತ್ ಸದಸ್ಯರಾದ ಇಬ್ರಾಹಿಂ ಮಿತ್ತರಾಜೆ, ಎಸ್.ವೈ.ಎಸ್ ಪಂಜರಕೋಡಿ ಬ್ರಾಂಚ್ ಅಧ್ಯಕ್ಷರಾದ ಹಮೀದ್ ಬಿಬಿಸಿ, ಹಾಗೂ ಸುನ್ನೀ ಸಂಘ ಕುಟುಂಬಗಳ ನೇತಾರರು ಕಾರ್ಯಕರ್ತರು ಪಾಲ್ಗೊಂಡಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ