ಮಂಗಳೂರು: ಸುನ್ನಿ ಶಿಕ್ಷಕರ ಸಂಘ ದಕ್ಷಿಣ ಕನ್ನಡ ಜಿಲ್ಲೆ (ಪಶ್ಚಿಮ) ಇದರ ಸುನ್ನೀ ಬಾಲ ಸಂಘ SBS ಇದರ ಪ್ರತಿನಿಧಿ ಸಮಾವೇಶವು 2019 ಅಕ್ಟೋಬರ್ 12 ರಂದು ಬಿ.ಸಿ.ರೋಡ್ ಸ್ಪರ್ಶಾ ಸಭಾಂಗಣದಲ್ಲಿ ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ.
“ ನಮ್ಮ ಮಕ್ಕಳು ನಾಳೆಯ ಸಂಪತ್ತು” ಎಂಬ ಘೋಷವಾಕ್ಯದೊಂದಿಗೆ ನಡೆಯುವ ಸಮಾವೇಶದ ಲೋಗೋವನ್ನು ಪಡೀಲಿನಲ್ಲಿ ನಡೆದ ಸಭೆಯಲ್ಲಿ ಶಿಕ್ಷಕ ಒಕ್ಕೂಟದ ಉಪಾಧ್ಯಕ್ಷ O.K. ಸಈದ್ ಮುಸ್ಲಿಯಾರ್ ಬಿಡುಗಡೆಗೊಳಿಸಿದರು.
ಈ ಸಮಾವೇಶದಲ್ಲಿ ಜಿಲ್ಲೆಯ ಪ್ರತಿ ಮದ್ರಸಗಳಿಂದ ನಿಗದಿತ 3 ಮಂದಿ ಭಾಗವಹಿಸಲಿದ್ದು ಸಂಪನ್ಮೂಲ ವ್ಯಕ್ತಿಗಳಿಂದ 2 ತರಗತಿಗಳು ನಡೆಯಲಿದೆ.
ಸಮಾವೇಶವು ಜಿಲ್ಲಾಧ್ಯಕ್ಷ ಪಿ.ಎಂ.ಮುಹಮ್ಮದ್ ಮದನಿಯವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಸುನ್ನೀ ಸಂಘ ಕುಟುಂಬದ ನಾಯಕರು ಗಣ್ಯರು ಭಾಗವಹಿಸಲಿದ್ದಾರೆ.ಅಪರಾಹ್ನ 2:30 ಬಿ.ಸಿ. ರೋಡಿನಲ್ಲಿ SBS ವಿದ್ಯಾರ್ಥಿಗಳಿಂದ ಆಕರ್ಷಕ ಬಾಲ ಸಂಚಯನ ಜಾಥಾ ನಡೆಯಲಿದೆ ಎಂದು ಶಿಕ್ಷಕರ ಒಕ್ಕೂಟ ಜಿಲ್ಲಾ ಕಾರ್ಯದರ್ಶಿ ಇಬ್ರಾಹಿಂ ಖಲೀಲ್ ಮುಸ್ಲಿಯಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ