ನ್ಯೂಯಾರ್ಕ್: ನ್ಯೂಯಾರ್ಕ್ನಲ್ಲಿ ನಡೆದ ಯುಎನ್ ಜನರಲ್ ಅಸೆಂಬ್ಲಿಯ 74 ನೇ ಅಧಿವೇಶನದಲ್ಲಿ ಟರ್ಕಿಯ ಅಧ್ಯಕ್ಷ ಉರ್ದುಗಾನ್ ಕಾಶ್ಮೀರ ವಿಷಯವನ್ನು ಎತ್ತಿದ್ದಾರೆ. ಕಾಶ್ಮೀರವನ್ನು ಬದಿಗಿಟ್ಟು ದಕ್ಷಿಣ ಏಷ್ಯಾದಲ್ಲಿ ಸ್ಥಿರತೆ ಮತ್ತು ಪ್ರಗತಿಯನ್ನು ಸಾಧಿಸಲು ಸಾಧ್ಯವಿಲ್ಲ. ಭಾರತೀಯ ಕಾಶ್ಮೀರದಲ್ಲಿ 80 ಲಕ್ಷಕ್ಕೂ ಹೆಚ್ಚು ನಾಗರಿಕರು ಸಿಲುಕಿ ಕೊಂಡಿದ್ದಾರೆ ಎಂದು ಉರ್ದುಗಾನ್ ಆರೋಪಿಸಿದರು.
ಸುರಕ್ಷಿತ ಭವಿಷ್ಯಕ್ಕಾಗಿ ಸಂಘರ್ಷಕ್ಕಿಂತ ಸಂಭಾಷಣೆಯ ಮೂಲಕ ಪರಿಹಾರ ಕಾಣಬೇಕು. 72 ವರ್ಷದ ಕಾಶ್ಮೀರಿ ಸಮಸ್ಯೆಯನ್ನು ನ್ಯಾಯ ಮತ್ತು ಸಮಾನತೆಯ ಆಧಾರದ ಮೇಲೆ ಮಾತುಕತೆಗಳ ಮೂಲಕ ಪರಿಹರಿಸಬೇಕು. ಕಾಶ್ಮೀರ ವಿಷಯದಲ್ಲಿ ಮಧ್ಯಪ್ರವೇಶಿಸಲು ಅಂತರ್ ರಾಷ್ಟ್ರೀಯ ಸಮುದಾಯ ವಿಫಲವಾಗಿದೆ ಎಂದು ಅವರು ಆರೋಪಿಸಿದರು.
ಭಾರತ ಮತ್ತು ಪಾಕಿಸ್ತಾನದ ಜೊತೆಗೂಡಿ ನಡೆಸುವ ಮಾತುಕತೆಯ ಮೂಲಕ ಕಾಶ್ಮೀರಿ ನಾಗರಿಕರು ತಮ್ಮ ಭವಿಷ್ಯವನ್ನು ಭದ್ರಪಡಿಸಿಕೊಳ್ಳಬೇಕು ಎಂದರು. ಇತ್ತೀಚೆಗೆ ಯುಎನ್ ಸಭೆಯಲ್ಲಿ ಪಾಕಿಸ್ತಾನದ ಪ್ರದಾನಿ ಇಮ್ರಾನ್ ಖಾನ್, ಉರ್ದುಗಾನ್ ಅವರನ್ನು ಭೇಟಿಯಾಗಿ, ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಭಾರತ ಸರಕಾರದ ಕಾನೂನುಬಾಹಿರ ಮತ್ತು ಏಕಪಕ್ಷೀಯ ಕ್ರಮಗಳ ನಂತರ ಕಾಶ್ಮೀರದ ಇತ್ತೀಚಿನ ಪರಿಸ್ಥಿತಿಗಳ ಬಗ್ಗೆ ವಿವರಿಸಿದ್ದರು.















ಇನ್ನಷ್ಟು ಸುದ್ದಿಗಳು
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ವಿಕಾಸದ ಕೂಗಿನೊಂದಿಗೆ ಇತ್ತಿಹಾದ್ ರೈಲು; ಟಿಕೆಟ್ ದರ ಮತ್ತು ರಿಯಾಯಿತಿಗಳ ಘೋಷಣೆ
ಯುಎಇ: ಮುಂದುವರಿದ ಭಾರತೀಯ ಪಾಸ್ಪೋರ್ಟ್ ಸೇವಾ ಬಿಕ್ಕಟ್ಟು
ಇತ್ತಿಹಾದ್ ರೈಲಿಗೆ ಐತಿಹಾಸಿಕ ಕ್ಷಣ; ಭವ್ಯ ಆರಂಭಕ್ಕೆ ಯುಎಇನಲ್ಲಿ ಅಭೂತಪೂರ್ವ ಜನಸ್ಪಂದನ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ